ಕನ್ನಡಪ್ರಭ ವಾರ್ತೆ ಕಲಬುರಗಿ
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮತ ಚಲಾವಣೆ ನಮ್ಮ ಹಕ್ಕು. ಆದರೆ ಮತ ಚಲಾಯಿಸಿ ಎಂದು ಹೇಳಬೇಕಾದ ಸನ್ನಿವೇಶ ಬಂದಿದೆ. 18 ವರ್ಷ ಪೂರ್ಣಗೊಂಡ ನಂತರ ವ್ಯಕ್ತಿಗೆ ತಿಳುವಳಿಕೆ ಬರುವ ಕಾರಣ ಉತ್ತಮ ಜನಪ್ರತಿನಿಧಿಯನ್ನು ಚುನಾಯಿಸಬಲ್ಲ ಎಂದು ಸಂವಿಧಾನದಲ್ಲಿ ವಯಸ್ಸಿಗೆ ಮಹತ್ವ ನೀಡಿ ಪವಿತ್ರ ಮತದಾನದ ಹಕ್ಕು ನೀಡಲಾಗಿದೆ. ಮತದಾನ ದಿನದಂದು ರಜೆ ಸಹ ನೀಡಲಾಗುತ್ತದೆ. ಹೀಗಿದ್ದಾಗಿಯೂ ಮತ ಚಲಾವಣೆಗೆ ಹಿಂದೇಟು ಏಕೆ ಎಂದು ಅರ್ಥವಾಗುತ್ತಿಲ್ಲ ಎಂದ ಅವರು, ಇಂದಿನ ಯುವ ಸಮೂಹ ಇದನ್ನರಿತು ಪ್ರಜಾ ಸ್ನೇಹಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಶ್ಯಕತೆ ಇದೆ ಎಂದು ಎಸ್.ನಾಗಶ್ರೀ ಅವರು ಪ್ರತಿಪಾದಿಸಿದರು.ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ಕೊಟ್ಟಿರುವ ದೊಡ್ಡ ಕೊಡುಗೆ ಎಂದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ. ಇದಕ್ಕೆ ನಾವೆಲ್ಲ ಅಭಾರಿಯಾಗಿದ್ದೇವೆ. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯ ಭಾಗಿಯಾಗಬೇಕು ಎಂದು ಯುವ ಜನತೆಗೆ ಕರೆ ನೀಡಿದರು.
ಜಿಲ್ಲಾ ಪಂಚಾಯ್ತಿ ಸಿ.ಇ.ಓ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಅವರ ನೆರದ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ಮತದಾರರ ಪ್ರತಿಜ್ಞೆ ಬೋಧಿಸಿದರು. ಇದೇ ಸಂದರ್ಭದಲ್ಲಿ ನೂತನ ಯುವ ಮತದಾರರಿಗೆ ಎಪಿಕ್ ಕಾರ್ಡ್ ವಿತರಿಸಲಾಯಿತು.