ಶಾಂತಿ ಸೌಹಾರ್ದತೆಯಿಂದ ಯುಗಾದಿ, ರಂಜಾನ್‌ ಆಚರಣೆ ಎಲ್ಲರ ಸಹಕಾರ ಮುಖ್ಯ

KannadaprabhaNewsNetwork |  
Published : Mar 17, 2026, 01:45 AM IST
ಮಹಾಲಿಂಗಪುರ ಪುರಸಭೆಯ ಸನ್ ೨೦೨೬-೨೭ನೇ ಸಾಲಿನ ಪುರಸಭೆಯ ಅಯವ್ಯಯ(ಬಜೆಟ್)ಗೆ ಜಮಖಂಡಿ ಎಸಿ ಶ್ವೇತಾ ಬಿಡಿಕರ ಅನುಮೋದನೆ ನೀಡಿದರು. | Kannada Prabha

ಸಾರಾಂಶ

ಈ ಬಾರಿ ಯುಗಾದಿ ಹಾಗೂ ರಂಜಾನ್ ಹಬ್ಬಗಳು ಒಟ್ಟಿಗೆ ಬಂದಿವೆ. ಹಬ್ಬಗಳು ಒಟ್ಟಿಗೆ ಬರುವುದು ಸೌಹಾರ್ಧತೆಯ ಸಂಕೇತ ಈ ಹಿನ್ನೆಲೆಯಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯದವರು ಯಾವುದೇ ಅನಾಹುತಗಳಿಗೆ ಎಡೆಮಾಡಿಕೊಡದೇ ಶಾಂತಿಯುತವಾಗಿ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಮುಂಬರುವ ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಣೆ ಮಾಡಲು ಎಲ್ಲರೂ ಸಹಕರಿಸಿ ಸೌಹಾರ್ಧತೆ ಕಾಪಾಡಿ ಎಂದು ಜಿಲ್ಲಾಧಿಕಾರಿ ಶ್ರೀರೂಪ ಸಲಹೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಸೌಹಾರ್ಧತೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,

ಈ ಬಾರಿ ಯುಗಾದಿ ಹಾಗೂ ರಂಜಾನ್ ಹಬ್ಬಗಳು ಒಟ್ಟಿಗೆ ಬಂದಿವೆ. ಹಬ್ಬಗಳು ಒಟ್ಟಿಗೆ ಬರುವುದು ಸೌಹಾರ್ಧತೆಯ ಸಂಕೇತ ಈ ಹಿನ್ನೆಲೆಯಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯದವರು ಯಾವುದೇ ಅನಾಹುತಗಳಿಗೆ ಎಡೆಮಾಡಿಕೊಡದೇ ಶಾಂತಿಯುತವಾಗಿ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದರು.

ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದು ಎಲ್ಲೆಂದರಲ್ಲಿ ಕಸದ ರಾಶಿ ರಾರಾಜಿಸುತ್ತಿದೆ. ಸಮರ್ಪಕವಾಗಿ ಕಸ

ವಿಲೇವಾರಿಯಾಗುತ್ತಿಲ್ಲ. ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲ ಎಂದು ಮುಖಂಡರಾದ ನಯಾಜ್ ಪಾಷ, ಸುರೇಶ್ ನಾಯಕ, ಅಯೂಬ್ ಖಾನ್, ಕಲೀಲ್ ವುಲ್ಲಾ, ನಿಜಧ್ವನಿ ಗೋವಿಂದರಾಜು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿದ್ದ ನಗರಸಭೆ ಆಯುಕ್ತ ಪರಶುರಾಮ್ ಚಲವಾದಿ ಅವರಿಗೆ ಸೂಚನೆ ನೀಡಿದರು. ಅಲ್ಲದೇ ಈ ಸಂಬಂಧ ಹಬ್ಬಗಳು ಮುಗಿದ ಬಳಿಕ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಮಾತನಾಡಿ, ಹಬ್ಬದ ದಿನಗಳ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಇರುವುದರಿಂದ ಧ್ವನಿವರ್ಧಕಗಳನ್ನು ಹೆಚ್ಚಾಗಿ ಬಳಕೆ ಮಾಡಬಾರದು. ಹಿಂದೂ ಹಾಗೂ ಮುಸ್ಲಿಂ ಸಮುದಾಯವರು ಒಗ್ಗಟ್ಟಾಗಿ ಹಬ್ಬಗಳನ್ನು ಆಚರಣೆ ಮಾಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಹಾಗೂ ಪ್ರಚೋದಕಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ದ ನಿರ್ಧಾಕ್ಷಿಣ ಕ್ರಮಕೈಗೊಳ್ಳಲಾಗುವುದು ಎಂದರು

ಸಭೆಯಲ್ಲಿ ಡಿವೈಎಸ್ಪಿ ಸ್ನೇಹಾರಾಜ್, ನಗರಸಭೆ ಆಯುಕ್ತ ಪರಶುರಾಮ್ ಚಲವಾದಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.--------------೧೬ಸಿಎಚ್‌ಎನ್೨ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿಸೋಮವಾರ ನಡೆದ ಯುಗಾದಿ ಹಾಗೂ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಸೌಹಾರ್ಧತೆ ಸಭೆಯಲ್ಲಿ ಜಿಲ್ಲಾಧಿಕಾರಿಶ್ರೀರೂಪ ಮಾತನಾಡಿದರು.ಎಸ್ಪಿ ಮುತ್ತುರಾಜು, ಡಿವೈಎಸ್ಪಿ ಸ್ನೇಹಾರಾಜ್, ಇದ್ದಾರೆ.------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಲಾ ನಿರ್ಮಾಣಕ್ಕಾಗಿ ಭೂ ಸ್ವಾಧೀನ; ರೈತರಿಗೆ ವೈಜ್ಞಾನಿಕ ಪರಿಹಾರ ನೀಡದೆ ತಾರತಮ್ಯ
ಐದಳ್ಳ ಕಾವಲು ಭೂಮಿ ಬಿಡಲ್ಲ ಎಂದು ರೈತರ ಪ್ರತಿಭಟನೆ