ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ತಾಲೂಕಿನ ವಿವಿಧ ಇಲಾಖೆಗಳ ಆಶ್ರಯದಲ್ಲಿ ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಜೆ.ಜೆ. ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ 2006, ಪೋಕ್ಸೋ ಕಾಯ್ದೆ, ಆರ್ಟಿಐ ಕಾಯ್ದೆ, ಭ್ರೂಣಹತ್ಯೆ, ಕುಟುಂಬದಲ್ಲಿನ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಮಾರಾಟ ನಿಷೇಧ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ ವಸತಿ ಕುರಿತಂತೆ ಅರಿವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತಿಂಗಳಿನಿಂದ 11 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ. ಇನ್ನು ಮಾಹಿತಿ ಇಲ್ಲದೇ ಅದೆಷ್ಟು ಅಪ್ರಾಪ್ತರ ಮದುವೆಗಳು ನಡೆದಿರಬಹುದು? ದಾವಣಗೆರೆಯಲ್ಲಿ ಕಳೆದ 3 ತಿಂಗಳ ಅವಧಿಯಲ್ಲಿ 145 ಬಾಣಂತಿಯರು ಸಾವಿಗೀಡಾಗಿದ್ದಾರೆ. ಸರ್ಕಾರ ಗರ್ಭಿಣಿ, ಬಾಣಂತಿಯರ ಪೌಷ್ಠಿಕಾಂಶದ ವೃದ್ದಿಗೆ ಮತ್ತು ಅವರ ಲಾಲನೆ ಪಾಲನೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಿದ್ದರೂ ಬಾಣಂತಿಯರ ಸಾವು ಹೇಗೆ ಸಂಭವಿಸಿತು ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್.ನಿರ್ಮಲಾ, ದಾವಣಗೆರೆ ಚೈಲ್ಡ್ ರೈಟ್ಸ್ ಆಕ್ಟಿವಿಟಿಯ ಮಂಜಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್, ಶಿರಸ್ತೇದಾರ್ ಮೋಹನ್ ಮೊದಲಾದವರು ಹಾಜರಿದ್ದರು.