- ಭಕ್ತರಿಂದ ಗೌರವ ಸ್ವೀಕರಿಸಿ ಶರಣ ಡಾ. ಬಸವಲಿಂಗ ಶಿವಯೋಗಿ ಶ್ರೀ ಸಲಹೆ - - - ಕನ್ನಡಪ್ರಭ ವಾರ್ತೆ ಹರಿಹರ ಶ್ರೀ 108 ಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲು ಎಲ್ಲರ ಸಹಕಾರ ಅಗತ್ಯ. ಧರ್ಮದ ಹಾದಿಯಲ್ಲಿ ನಡೆದರೆ ಕೈಗೊಂಡ ಕಾರ್ಯಗಳು ಯಶಸ್ಸಿನತ್ತ ಸಾಗುತ್ತವೆ ಎಂದು 108 ಲಿಂಗೇಶ್ವರ ದೇವಸ್ಥಾನದ ಶ್ರೀ ಶರಣ ಡಾ. ಬಸವಲಿಂಗ ಶಿವಯೋಗಿ ಸ್ವಾಮೀಜಿ ನುಡಿದರು.
ನಾವು ಧರ್ಮವನ್ನು ರಕ್ಷಣೆ ಮಾಡಿದಾಗ ಧರ್ಮ ನಮ್ಮನ್ನು ರಕ್ಷಣೆ ಮಾಡುತ್ತದೆ. ಧರ್ಮದ ಹಾದಿಯಲ್ಲಿ ನಡೆದ ಮನುಷ್ಯನು ಸನ್ಮಾರ್ಗದಲ್ಲಿ ಸಾಗುತ್ತಾನೆ. ಸತ್ಯ, ಶಾಂತಿ, ಪರೋಪಕಾರ ಗುಣಗಳೊಂದಿಗೆ ಭೇದಭಾವ ಇಲ್ಲದೇ, ಎಲ್ಲರೂ ಒಂದೇ ಎಂಬ ಭಾವನೆಯಿಂದ ಮುನ್ನಡೆಯಬೇಕು. ಆಗ ಆ ವ್ಯಕ್ತಿ ಎತ್ತರ ಸ್ಥಾನದಲ್ಲಿರುತ್ತಾನೆ ಎಂದರು.
ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲವು ಮಠಗಳು ಶ್ರದ್ಧಾ-ಭಕ್ತಿಯ ಕೇಂದ್ರಗಳಾಗಿ ಧರ್ಮ ಸಂಸ್ಕಾರ, ಜನರಿಗೆ ಭಕ್ತಿ ಮಾರ್ಗ ನೀಡುವುದು ಬಿಟ್ಟು, ಯಾವ ಸರ್ಕಾರ ಅಧಿಕಾರಕ್ಕೆ ಬರುತ್ತೋ ಆ ಸರ್ಕಾರದ ಪರವಾಗಿ ನಿಂತು ಮಠಕ್ಕೆ ಅನುದಾನ ಪಡೆಯುವುದೇ ಸಾಧನೆ ಎನ್ನುವಂತಾಗಿದೆ ಎಂದರು.ಮಾಜಿ ಶಾಸಕ ಎಸ್. ರಾಮಪ್ಪ, ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಯಾವುದೇ ಆದಾಯವಿಲ್ಲದ ಈ ದೇವಸ್ಥಾನದಲ್ಲಿ. ಮಳಿಗೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ಆದಾಯದ ವೃದ್ಧಿಗೆ ಯೋಜನೆಯನ್ನು ರೂಪಿಸಿರುವುದು ಶ್ಲಾಘನೀಯ ಎಂದರು.
- - - -01ಎಚ್ಆರ್ಆರ್02:
ಹರಿಹರದ ಶ್ರೀ ಕುಂಬಳೇಶ್ವರ 108 ಲಿಂಗೇಶ್ವರ ದೇವಸ್ಥಾನದಲ್ಲಿ ಶರಣ ಡಾ. ಬಸವಲಿಂಗ ಶಿವಯೋಗಿ ಸ್ವಾಮೀಜಿ ಜನ್ಮ ದಿನಾಚರಣೆಯಲ್ಲಿ ಗೌರವಿಸಲಾಯಿತು.