ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಎಲ್ಲರ ಸಹಕಾರ ಅಗತ್ಯ

KannadaprabhaNewsNetwork |  
Published : Sep 21, 2024, 01:52 AM IST
ಚಿತ್ರ 1 | Kannada Prabha

ಸಾರಾಂಶ

ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುವುದರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ತಡೆಗಟ್ಟಬೇಕಿದೆ ಎಂದು ಪೌರಾಯುಕ್ತ ವಾಸಿಂ ರವರು ಹೇಳಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು: ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುವುದರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ತಡೆಗಟ್ಟಬೇಕಿದೆ ಎಂದು ಪೌರಾಯುಕ್ತ ವಾಸಿಂ ರವರು ಹೇಳಿದರು.

ನಗರದ ನೆಹರೂ ಮಾರ್ಕೆಟ್ ಮುಂಭಾಗ ಸ್ವಚ್ಛ ಭಾರತ ಮಿಷನ್, ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ನಡೆದ ಪ್ಲಾಸ್ಟಿಕ್ ಬಗೆಗಿನ ಜನಜಾಗೃತಿ ಕಾರ್ಯಕ್ರಮದ ಬೀದಿ ನಾಟಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪ್ಲಾಸ್ಟಿಕ್ ಬಳಕೆ ನಿಷಿದ್ಧವಾಗಿದ್ದು, ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಪ್ಲಾಸ್ಟಿಕ್ ಬಳಕೆಯಿಂದ ಅನೇಕ ಮಾರಣಾಂತಿಕ ರೋಗಗಳು ಹರಡುವ ಸಂಭವವಿದೆ. ಪ್ಲಾಸ್ಟಿಕನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ನಗರದಲ್ಲಿರುವ ಬೀಡಾಡಿ ದನ ಕರುಗಳು ತಿಂದು ಸಾವನ್ನಪ್ಪುತ್ತವೆ. ಹಾಗಾಗಿ ನಗರದ ಜನತೆ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಅರಿತು ನಗರವನ್ನು ಮತ್ತು ನಗರದ ಆರೋಗ್ಯದ ವೃದ್ಧಿಗೆ ಸಹಕರಿಸಬೇಕು ಎಂದರು.

ನಗರಸಭಾಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ನಗರದ ಜನತೆ ಪ್ಲಾಸ್ಟಿಕ್ಕನ್ನು ಬಳಸದೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಗರವನ್ನು ಸ್ವಚ್ಛವಾಗಿಡಲು ಜನತೆ ನಮ್ಮ ಜೊತೆ ಕೈಜೋಡಿಸಬೇಕು. ಅಷ್ಟೇ ಅಲ್ಲ ಪ್ಲಾಸ್ಟಿಕ್ ಬಳಕೆಯನ್ನು ಇಂದಿನಿಂದಲೇ ನಿಲ್ಲಿಸಿ ದಿನಸಿ ಪದಾರ್ಥಗಳು, ಹಣ್ಣು ಹಾಗೂ ಇನ್ನಿತರ ವಸ್ತುಗಳನ್ನು ಕೊಂಡೊಯ್ಯಲು ಬಟ್ಟೆ ಬ್ಯಾಗುಗಳನ್ನು ಬಳಸುವ ನಿರ್ಧಾರ ಮಾಡಿ ಎಂದು ಕರೆ ನೀಡಿದರು.

ಸುಂದರ ಹಾಗೂ ಆರೋಗ್ಯಯುತ ನಗರ ನಿರ್ಮಾಣಕ್ಕೆ ನಾಗರೀಕರೆಲ್ಲರೂ ಕೈ ಜೋಡಿಸಬೇಕು ಎಂದರು. ಸೂರ್ಯೋದಯ ಜಾನಪದ ಸಾಂಸ್ಕೃತಿಕ ಕಲಾತಂಡದ ವತಿಯಿಂದ ಪ್ಲಾಸ್ಟಿಕ್ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷಕ ಸಿಬ್ಬಂದಿಗಳು, ಬೀದಿ ನಾಟಕ ಕಲಾವಿದರಾದ ಎಚ್ ಎಸ್. ಮಾರುತೇಶ್, ಆಶಾ, ಲತಾ, ಭಾಸ್ಕರ್, ಚನ್ನಪ್ಪ, ಯಲ್ಲಪ್ಪ, ಸಿದ್ದೇಶ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು
ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಕಸರತ್ತು ಸಿದ್ದರಾಮಯ್ಯ ಬಜೆಟ್‌ ತಯಾರಿ