ದುಶ್ಚಟ ತಡೆಗಟ್ಟುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಪ್ರಮುಖ: ಡಾ.ಪರಶುರಾಮ ರಾವಳ

KannadaprabhaNewsNetwork |  
Published : Jun 30, 2024, 12:56 AM IST
ದುಶ್ಚಟಗಳ ತಡೆಗಟ್ಟುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಮುಖ್ಯ : ಡಾ.ಪರಶುರಾಮ್ ರಾವಳ. | Kannada Prabha

ಸಾರಾಂಶ

ಬನಹಟ್ಟಿಯ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ವಿಶ್ವದಾದ್ಯಂತ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಆದ್ದರಿಂದ ಮಕ್ಕಳ ರಕ್ಷಣೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಮುಖ್ಯ ಎಂದು ಬನಹಟ್ಟಿಯ ವೈದ್ಯ ಡಾ.ಪರಶುರಾಮ ರಾವಳ ಹೇಳಿದರು.

ಬನಹಟ್ಟಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬನಹಟ್ಟಿ ವಲಯದಿಂದ ಹಮ್ಮಿಕೊಂಡ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸೇವಿಸುವುದರಿಂದ ಆಗುವ ದುಷ್ಪರಿಣಾಮಗಳನ್ನು ಸಾಕ್ಷ್ಯ ಚಿತ್ರಗಳ ಮೂಲಕ ವಿವರಿಸಿದರು. ಮಾದಕ ವಸ್ತುಗಳಿಗೆ ದಾಸರಾಗದೆ ಸಮಾಜದಲ್ಲಿ ಸದೃಢ ಜೀವನ ನಡೆಸಬೇಕು. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕ ವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ಚಂದ್ರಪ್ರಭಾ ಬಾಗಲಕೋಟ ಮಾತನಾಡಿ, ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲವಾದದ್ದು, ಯಾರು ಕೂಡ ಮಾದಕ ವಸ್ತುಗಳಿಗೆ ಆಕರ್ಷಿತರಾಗದೇ ದುಷ್ಟ ವ್ಯಸನಗಳಿಂದ ದೂರುವಿದ್ದು, ಒಳ್ಳೆಯ ಭವಿಷ್ಯರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬನಹಟ್ಟಿ ವಲಯ ಮೇಲ್ವಿಚಾರಕ ಶಿವಾನಂದ ಎಂ.ವೈ., ಸೇವಾ ಪ್ರತಿನಿಧಿ ಗಾಯತ್ರಿ ಪೂಜಾರಿ, ಕಾಡೇಶ ನಾವಿ, ಎಸ್. ಆರ್. ಮಹಾಜನ ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ