ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

KannadaprabhaNewsNetwork |  
Published : Jul 01, 2026, 02:00 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿ ಹೊಂದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಭಾಗವಹಿಸುವಂತೆ ಅವರನ್ನು ಪ್ರೋತ್ಸಾಹಿಸಬೇಕು.

ಗದಗ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕಾಗಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಪಜಾ, ಪಪಂ ಜಿಲ್ಲಾ ಜಾಗೃತ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿ ಹೊಂದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಭಾಗವಹಿಸುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಗುಣಮಟ್ಟದ ಶಿಕ್ಷಣವನ್ನು ಶಾಲಾ ಮಕ್ಕಳಿಗೆ ನೀಡುವುದು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಪರಿಶಿಷ್ಟ ಸಮುದಾಯ ಕಾಲನಿಗಳಲ್ಲಿ ರಸ್ತೆ, ವಿದ್ಯುತ್ ಪೂರೈಕೆ, ಸಮರ್ಪಕ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಮೂಲ ಸೌಕರ್ಯಗಳು ಒದಗುವಂತೆ ನೋಡಿಕೊಳ್ಳಬೇಕು. ಪ.ಜಾ, ಪ.ಪಂ. ದೌರ್ಜನ್ಯ ಪ್ರಕರಣದಡಿ ಅರ್ಹ ಸಂತ್ರಸ್ತರಿಗೆ ಪರಿಹಾರಧನ ಒದಗಿಸುವಲ್ಲಿ ವಿಳಂಬವಾಗಬಾರದು. ಅಧಿಕಾರಿಗಳು ಅರ್ಹರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಪ.ಜಾ., ಪ.ಪಂ. ಜನರಿಗೆ ತಲುಪಬೇಕಾದ ವಸತಿ. ವೈದ್ಯಕೀಯ. ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳು ಅರ್ಹರಿಗೆ ಸಕಾಲದಲ್ಲಿಯೆ ದೊರಕಬೇಕು. ಫಲಾನುಭವಿಗಳ ಆಯ್ಕೆಪಟ್ಟಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಯಾವುದೇ ಕಾರಣಕ್ಕೂ ಸೌಲಭ್ಯಗಳ ವಿತರಣೆಯಲ್ಲಿ ದುರುಪಯೋಗವಾಗಬಾರದು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯ ಆರಂಭದಲ್ಲಿ ಹಿಂದಿನ ಸಭೆಯ ಅನುಪಾಲನಾ ವರದಿಯನ್ನು ಸಭೆಯ ಮುಂದೆ ಮಂಡಿಸಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ರೋಹನ್ ಜಗದೀಶ್, ಡಿವೈಎಸ್‌ಪಿ ಮಹಾಂತೇಶ ಸಜ್ಜನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಡಿಎಚ್‌ಒ ಡಾ.ಎಸ್.ಎಸ್. ನೀಲಗುಂದ, ಡಿಡಿಪಿಐ ಆರ್.ಎಸ್. ಬುರುಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ನಾಮನಿರ್ದೇಶಿತ ಸದಸ್ಯ ಶರೀಫ್ ಬಿಳೆಯಲಿ, ಸುರೇಶ ನಡುವಿನಮನಿ, ವಿನಾಯಕ ಬಳ್ಳಾರಿ, ತುಕ್ಕಪ್ಪ ಪೂಜಾರ, ಶ್ರೀನಿವಾಸ ದ್ಯಾವನೂರ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಸ್ವಾಗತಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ತುಂಗಭದ್ರಾ ನದಿಗೆ ಒಳಹರಿವೇ ಇಲ್ಲ!