ಕನ್ನಡಪ್ರಭವಾರ್ತೆ ವಿರಾಜಪೇಟೆ
ಅವರು ವಿರಾಜಪೇಟೆ -ಕಲ್ತೊಡು ಕ್ಲಸ್ಟರ್ ನ ಮುಖ್ಯ ಶಿಕ್ಷಕರ ಸಭೆ ಹಾಗೂ ವಿವಿಧ ಶಾಲೆಗಳ ಮುನ್ನೂರು ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಟ್ರ್ಯಾಕ್ ಶೂಟ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಮ್ಮ ರಾಜ್ಯದಲ್ಲಿಯೂ ಇತರ ರಾಜ್ಯಗಳಂತೆ ಶಾಲೆಗಳು ಅಭಿವೃದ್ಧಿ ಹೊಂದಬೇಕು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಎಂಬ ತಾರತಮ್ಯ ನಿವಾರಣೆ ಆಗಬೇಕು. ನಲಿ ಕಲಿ ಯು ಶಾಲಾ ಮಕ್ಕಳಿಗೆ ಉತ್ತಮ ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು ಮಕ್ಕಳು ಅದರ ಪ್ರಯೋಜನವನ್ನು ಪಡೆಯಬೇಕು ಎಂದರು. ಮಹಿಳಾ ಸಬಲೀಕರಣ ಹಾಗೂ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದ ಅವರು ಮಹಿಳೆಯರಿಗೆ ಪ್ರೋತ್ಸಾಹವನ್ನು ನೀಡಬೇಕೆಂದರು.ವಿರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರವಿ ಮಾತನಾಡಿ ಇಂದಿನ ಮುಖ್ಯ ಶಿಕ್ಷಕರ ಸಭೆಯಲ್ಲಿ ಶಾಲಾ ಮಕ್ಕಳಿಗೆ ಟ್ರ್ಯಾಕ್ ಶೂಟ್ ವಿತರಣೆ ಕಾರ್ಯಕ್ರಮ ನಡೆಯುತ್ತಿರುವುದು ಗಮನಾರ್ಹವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಚಿಕ್ಕಪೇಟೆಯ ಸ. ಮಾ. ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಅಣ್ಣಮ್ಮ ರವರು ಮಾತನಾಡಿ ವಿರಾಜಪೇಟೆ -ಕಲ್ತೊಡು ಕ್ಲಸ್ಟರ್ ನ ಎಲ್ಲಾ ಶಾಲೆಯ ಶಿಕ್ಷಕರು ಇಂದು ಇಲ್ಲಿ ಆಗಮಿಸಿದ್ದು ನಲಿ ಕಲಿ ಯ ಪರಿಣಾಮಕಾರಿ ಕಲಿಕೆಗೆ ಉಪಯುಕ್ತವಾಗಿದೆ. ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕರಾದ ಸೀತಾ, ಸುಜಾತ ಹಾಗೂ ಸ. ಕಿ. ಪ್ರಾ. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಇದ್ದರು. ವಿರಾಜಪೇಟೆ -ಕಲ್ತೊಡು ಕ್ಲಸ್ಟರ್ ನ ವಿವಿಧ ಶಾಲೆಗಳ ಮುನ್ನೂರು ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಿಸಲಾಯಿತು. ಶಾಲೆಗಳ ಮುಖ್ಯ ಶಿಕ್ಷಕರು ಟ್ರ್ಯಾಕ್ ಶೂಟ್ ನ್ನು ಪಡೆದುಕೊಂಡರು. ಶಿಕ್ಷಕಿ ಉಷಾ ನಿರೂಪಿಸಿದರು.