ರಕ್ತದಾನ ಮಾಡಲು ಎಲ್ಲರೂ ಮನಸ್ಸು ಮಾಡಬೇಕು: ಶಿವಕುಮಾರ್

KannadaprabhaNewsNetwork |  
Published : Jun 16, 2025, 01:12 AM IST
ಪ್ರಮಾಣಪತ್ರ ವಿತರಿಸಲಾಯಿತು | Kannada Prabha

ಸಾರಾಂಶ

ಯುವ ಸಮೂಹ ರಕ್ತದಾನದ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರೋಟರಿ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದ ಅಧ್ಯಕ್ಷ ಡಾ.ಎಚ್.ಎಂ.ಶಿವಕುಮಾರ್ ಹೇಳಿದರು.

ಸಾಗರ: ಯುವ ಸಮೂಹ ರಕ್ತದಾನದ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರೋಟರಿ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದ ಅಧ್ಯಕ್ಷ ಡಾ.ಎಚ್.ಎಂ.ಶಿವಕುಮಾರ್ ಹೇಳಿದರು.

ಇಲ್ಲಿನ ಉಪವಿಭಾಗೀಯ ಆಸ್ಪತ್ರೆ ಆವರಣದ ರೋಟರಿ ರೆಡ್‌ಕ್ರಾಸ್‌ ರಕ್ತನಿಧಿ ಕೇಂದ್ರದಲ್ಲಿ ಶನಿವಾರ ರಕ್ತನಿಧಿ ಕೇಂದ್ರ ಹಾಗೂ ಎಲ್.ಬಿ.ಕಾಲೇಜು ವತಿಯಿಂದ ಏರ್ಪಡಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವ ಜನರಲ್ಲಿ ರಕ್ತದಾನ ಕುರಿತು ಸಾಕಷ್ಟು ಆತಂಕ ಇದೆ. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುವ ತಪ್ಪು ಕಲ್ಪನೆ ಇದೆ. ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲವೆಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಆದ್ದರಿಂದ ರಕ್ತದಾನ ಮಾಡಲು ಎಲ್ಲರೂ ಮನಸ್ಸು ಮಾಡಬೇಕು. ಶುಭ ಸಮಾರಂಭ ಸಂದರ್ಭದಲ್ಲಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.

ಸಾಗರದ ರಕ್ತನಿಧಿ ಕೇಂದ್ರ ಉಪವಿಭಾಗೀಯ ಆಸ್ಪತ್ರೆ ಸೇರಿದಂತೆ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ರಕ್ತ ಪೂರೈಸುವ ಮೂಲಕ ಉತ್ತಮವಾಗಿ ಕೆಲಸ ಮಾಡುತ್ತಿದೆ. ರಕ್ತದ ಬೇಡಿಕೆ ಹೆಚ್ಚಿದ್ದು, ರಕ್ತದಾನಿಗಳ ಸಂಖ್ಯೆ ಕಡಿಮೆ ಇದೆ. ಹೆಚ್ಚು ಜನರು ರಕ್ತ ನೀಡಿದರೆ ಸಂಕಷ್ಟ ಸಂದರ್ಭದಲ್ಲಿ ರಕ್ತ ಪೂರೈಕೆ ಮಾಡಲು ಸಹಕಾರಿಯಾಗುತ್ತದೆ. ಎನ್.ಸಿ.ಸಿ. ವತಿಯಿಂದ ರಕ್ತದಾನ ಕುರಿತು ಜಾಗೃತಿ ಮೂಡಿಸುವುದು ಅನುಕರಣೀಯ ಕೆಲಸ ಎಂದು ಹೇಳಿದರು.

ರೋಟರಿ ರಕ್ತನಿಧಿ ಕೇಂದ್ರದ ಡಾ.ಬಿ.ಜಿ.ಸಂಗಮ್, ಎಂ.ಕೆ.ಶಾಂತಕುಮಾರ್, ಎಲ್.ಬಿ.ಕಾಲೇಜು ಎನ್.ಸಿ.ಸಿ. ಅಧಿಕಾರಿ ನೂತನ್ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!