ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಮಡಿಕೇರಿಯ 2024- 25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಪದಗ್ರಹಣ ಅಧಿಕಾರಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ರೋಟರಿ ಪದಾಧಿಕಾರಿಗಳು ಬದಲಾದ ಕಾಲಘಟ್ಟಕ್ಕೆ ತಕ್ಕ ಹಾಗೆ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸಬೇಕು. ಧನಾತ್ಮಕ ಚಿಂತನೆಗಳ ಮೂಲಕ ಜನಸೇವೆ ಮಾಡಬೇಕು. ಸೇವಾ ಮನೋಭಾವನೆಯ ಸದಸ್ಯರು ರೋಟರಿಗೆ ಅಗತ್ಯವಿದ್ದು, ಮಹಿಳೆಯರು ಸೇರಿದಂತೆ ವೈವಿಧ್ಯಮಯ ಕ್ಷೇತ್ರದಲ್ಲಿರುವ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಿ ಎಂದು ಸಲಹೆ ನೀಡಿದರು.ಸಮಾಜದಿಂದ ನಾವು ಸಾಕಷ್ಟು ಪಡೆದುಕೊಳ್ಳುತ್ತೇವೆ, ಅದನ್ನು ಮರಳಿ ಸಮಾಜಕ್ಕೆ ನೀಡುವ ಗುಣದೊಂದಿಗೆ ಸೇವೆಯನ್ನು ಮಾಡಬೇಕು ಎಂದು ಪ್ರಕಾಶ್ ಕಾರಂತ್ ತಿಳಿಸಿದರು.
ಮಾದಕ ವಸ್ತು ವಿರುದ್ಧ ಜಾಗೃತಿ, ವಾಹನ ಸಂಚಾರಿ ನಿಯಮದ ಅರಿವು, ಅಂಗನವಾಡಿಗಳಿಗೆ ಮೂಲಸೌಲಭ್ಯ ಒದಗಿಸುವುದು, ಪರಿಸರ ರಕ್ಷಣೆ ಪ್ರಮುಖ ಕಾರ್ಯಕ್ರಮಗಳಾಗಿದೆ. ರೋಟರಿ ಸದಸ್ಯರು ಸಮಾಜ ಸೇವೆಯ ಮೂಲಕವೇ ಗಮನಾರ್ಹ ಸಾಧನೆ ಮಾಡಬೇಕು ಎಂದು ಹೇಳಿದರು.
ರೋಟರಿ ಮಡಿಕೇರಿಯ ನೂತನ ಅಧ್ಯಕ್ಷ ಸುದಯ್ ನಾಣಯ್ಯ ಹಾಗೂ ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ ಅಧಿಕಾರ ಸ್ವೀಕರಿಸಿದರು. ರೋಟರಿ ಪ್ರಮುಖರಾದ ಕೆ.ಸಿ.ಕಾರ್ಯಪ್ಪ, ಬಿ.ಎಂ.ಸೋಮಣ್ಣ ಮತ್ತಿತರರಿದ್ದರು.