ಕನ್ನಡಪ್ರಭ ವಾರ್ತೆ ಅರಸೀಕೆರೆ
ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮನುಷ್ಯರ ನಡುವಿನ ಸಂಬಂಧಗಳನ್ನು ಆಸ್ತಿ ಅಥವಾ ಶ್ರೀಮಂತಿಕೆಯ ಆಧಾರದ ಮೇಲೆ ಅಳೆಯಬಾರದು. ಬದಲಾಗಿ ಪ್ರೀತಿ, ವಿಶ್ವಾಸ ಹಾಗೂ ಆತ್ಮೀಯತೆಯ ಮೇಲೆ ನಿಂತ ಸಂಬಂಧಗಳು ಜೀವನದಲ್ಲಿ ಶಾಶ್ವತವಾಗಿರುತ್ತವೆ ಎಂದು ಹೇಳಿದರು.
ಕುಟುಂಬಗಳಲ್ಲಿ ಸಣ್ಣಪುಟ್ಟ ವಿಷಯಗಳಿಗೆ ಕಲಹಗಳು ಉಂಟಾಗಿ ಕಾನೂನು ಪ್ರಕರಣಗಳವರೆಗೆ ಹೋಗುತ್ತಿರುವುದು ದುರದೃಷ್ಟಕರ ಸಂಗತಿ. ತಂದೆತಾಯಿ, ಮಕ್ಕಳು, ಸಹೋದರರು ಪರಸ್ಪರ ಕಷ್ಟಸುಖಗಳನ್ನು ಹಂಚಿಕೊಳ್ಳುವ ಮನೋಭಾವ ಬೆಳೆಸಿಕೊಂಡರೆ ಕುಟುಂಬದಲ್ಲಿ ಸೌಹಾರ್ದತೆ ಉಳಿಯುತ್ತದೆ ಎಂದು ಅವರು ತಿಳಿಸಿದರು.ಪ್ರತಿಯೊಬ್ಬರೂ ತಮ್ಮ ಅಂತರಂಗದ ಧ್ವನಿಯನ್ನು ಅನುಸರಿಸಿ ಧರ್ಮ ಮಾರ್ಗದಲ್ಲಿ ನಡೆದುಕೊಂಡರೆ ಜೀವನದಲ್ಲಿ ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ. ಮನುಷ್ಯನು ಹಣದ ಮೇಲಿನ ಅತಿಯಾದ ವ್ಯಾಮೋಹವನ್ನು ಕಡಿಮೆ ಮಾಡಿಕೊಂಡು ಗಳಿಸಿದ ಸಂಪತ್ತನ್ನು ಧರ್ಮ ಕಾರ್ಯಗಳಿಗೆ ಹಾಗೂ ಸಮಾಜ ಸೇವೆಗೆ ಬಳಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಧು ವೀರಶೈವ ಸಮಾಜದ ತಾಲೂಕು ಘಟಕದ ಅಧ್ಯಕ್ಷ ರೇವಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಶೇಖರಪ್ಪ, ಸೊಸೈಟಿಯ ಉಪಾಧ್ಯಕ್ಷ ಹಾಲಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಶಶಿಧರ್, ನಿರ್ದೇಶಕರಾದ ಚಂದ್ರಶೇಖರ್, ಬಸವರಾಜು, ಪ್ರಸನ್ನಕುಮಾರ್, ಸಂಗಮೇಶ್, ರವೀಶ್, ಪ್ರವೀಣ್, ಎಂ.ಬಿ. ಸಂಗಮೇಶ್, ಚಂದ್ರಪ್ಪ, ರಮೇಶ್, ಉಮೇಶ್, ಮೋಹನ್ ಕುಮಾರ್, ಸುಧಾ, ವಿಜಯ ಹಾಗೂ ಸಿಬ್ಬಂದಿ ಶಿವಕುಮಾರ್, ರಂಗಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.