ಪ್ರತಿಯೊಬ್ಬರಿಗೂ ಮತದಾನ ಹಕ್ಕು ಸಿಗಬೇಕು: ನಿತಿನ್‌ ಚಕ್ಕಿ

KannadaprabhaNewsNetwork |  
Published : Jul 10, 2026, 01:30 AM IST
ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಎಸೈಆರ್‌ ಮಾಹಿತಿ ಸಭೆ | Kannada Prabha

ಸಾರಾಂಶ

ಎಸ್‌ಐಆರ್ ಮಾಹಿತಿ ಸಭೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ಗುರುವಾರ ನಡೆಯಿತು.

ಸೋಮವಾರಪೇಟೆ: ಎಸ್‌ಐಆರ್ ಮಾಹಿತಿ ಸಭೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ಗುರುವಾರ ನಡೆಯಿತು.ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪದಾಧಿಕಾರಿಗಳು ಭಾಗವಹಿಸಿದ್ದರು. ಗ್ರಾಪಂ ವ್ಯಾಪ್ತಿಗೆ ಬರುವಂತಹ ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಎನ್ಯುಮರೇಶನ್ ಫಾರಂಗಳನ್ನು ಕೊಟ್ಟು ಅದನ್ನು ಭರ್ತಿ ಮಾಡಲು ಸಹಕಾರ ನೀಡಬೇಕು. ಪಕ್ಷದ ಪದಾಧಿಕಾರಿಗಳು ಬಿಎಲ್‌ಒಗಳಿಗೆ ಸಹಕಾರ ನೀಡಬೇಕು. ಮನೆಗಳ ಮಾಹಿತಿ ನೀಡಬೇಕು. ಕೆಲವೊಂದು ಮನೆಗಳಿಗೆ ತಲಪಲಾಗದ ಸ್ಥಿತಿ ಇದ್ದರೆ, ಪಿಡಿಒಗಳೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಪ್ರತಿಯೊಬ್ಬರಿಗೂ ಮತದಾನ ಹಕ್ಕು ಸಿಗಲೇಬೇಕು. ಇದ್ದಕ್ಕಾಗಿ ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿದೆ. ತಾವುಗಳು ಕೈಜೋಡಿಸಬೇಕು. ಬಿಎಲ್‌ಒಗಳು ಶ್ರಮ ವಹಿಸಿ ಉತ್ತಮ ಕರ್ತವ್ಯ ನಿರ್ವಹಿಸಿದರೆ ಅಂತಹವರನ್ನು ಗೌರವಿಸಲಾಗುವುದು ಎಂದು ಹೇಳಿದರು.

ಹರದೂರು ಗ್ರಾಪಂ ವ್ಯಾಪ್ತಿಯಲ್ಲಿ ೧೦೦ ಫಾರಂಗಳನ್ನು ಮನೆ ಮನೆಗೆ ವಿತರಿಸಲಾಗಿದೆ. ಅದರಲ್ಲಿ ೩೦ರಷ್ಟು ಫಾರಂಗಳಲ್ಲಿ ಮಾಹಿತಿ ಕೊರತೆಯಿಂದ ತಪ್ಪಾಗಿ ಭರ್ತಿ ಮಾಡಲಾಗಿದೆ. ಅದನ್ನೇ ಅಪ್‌ಲೋಡ್ ಮಾಡಲಾಗಿದೆ. ಬಿಎಲ್‌ಒಗಳು ಮತದಾರರ ಮನೆಯಲ್ಲೇ ಭರ್ತಿ ಮಾಡಿ ಅಪ್‌ಲೋಡ್ ಮಾಡಿದರೆ ಮಾತ್ರ, ತಪ್ಪುಗಳಾಗುವುದಿಲ್ಲ ಎಂದು ಅಬ್ದುಲ್ ನಾಸೀರ್ ಹೇಳಿದರು.

ತಪ್ಪಾಗಿ ಅಪ್‌ಲೋಡ್ ಆಗಿರುವುದು ಗೊತ್ತಾದರೆ ಅಂತಹ ಮತದಾರರ ಅಕ್ಷೇಪಣಾ ಪತ್ರವನ್ನು ಸಲ್ಲಿಸುವ ಅವಕಾಶವಿದೆ. ಎಸಿ ಲಾಗಿನ್‌ಗೆ ಹೋದಾಗ ಅದನ್ನು ಸರಿಪಡಿಸಬಹುದು ಎಂದು ತಹಸೀಲ್ದಾರ್ ಮಾಹಿತಿ ನೀಡಿದರು.

ರಾಜಕೀಯ ಪಕ್ಷಗಳ ಪ್ರಮುಖರಾದ ಬಿ.ಬಿ. ಸತೀಶ್, ಎಸ್.ಆರ್. ಸೋಮೇಶ್, ಮಹೇಶ್ ತಿಮ್ಮಯ್ಯ, ಸಿ.ಎಸ್. ನಾಗರಾಜು, ಜೆ.ಎಲ್. ಜನಾರ್ದನ್, ಬಿ. ಶಿವಪ್ಪ, ಸುನಿಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರಹಗಾರರ ಪ್ರೋತ್ಸಾಹಿಸಿ: ಹರಿಕೃಷ್ಣ ಪುನರೂರು
14ರೊಳಗೆ ಏತ ನೀರಾವರಿಗೆ ನೀರು ಹರಿಸಿ: ಎಸ್.ಕೆ. ಬೆಳ್ಳುಬ್ಬಿ