ಪ್ರತಿಯೊಬ್ಬರು ನಮ್ಮ ಮಾತೃ ಭಾಷೆ ಕನ್ನಡಕ್ಕೆ ಮೊದಲು ಆದ್ಯತೆ ನೀಡಬೇಕು : ಸಿ.ಸಿ. ಪಾಟೀಲ

KannadaprabhaNewsNetwork |  
Published : Nov 02, 2024, 01:44 AM ISTUpdated : Nov 02, 2024, 05:47 AM IST
(1ಎನ್.ಆರ್.ಡಿ1 ಶಾಸಕ ಸಿ.ಸಿ.ಪಾಟೀಲರು ಸಸಿಗೆ ನೀರು ಹಾಕುವ ಮೂಲಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.)   | Kannada Prabha

ಸಾರಾಂಶ

ಹಲವಾರು ಅನ್ಯ ಭಾಷೆಗಳಿಗೆ ಪ್ರಾಮುಖ್ಯತೆ ಕೊಡುವ ಮೊದಲು ನಮ್ಮ ಮಾತೃ ಭಾಷೆ ಕನ್ನಡಕ್ಕೆ ಮೊದಲು ಆದ್ಯತೆ ನೀಡಬೇಕು

ನರಗುಂದ: ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ಒಂದೇ ದಿನಕ್ಕೆ ಸೀಮಿತವಾಗಿರದೇ ವರ್ಷ ಪೂರ್ತಿ ಕನ್ನಡ ಭಾಷೆಯ ಅಭಿಮಾನಿಗಳಾಗಿರಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಪುರಸಭೆ ಆವರಣದಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿ, ಕರ್ನಾಟಕವನ್ನು ಒಂದಗೂಡಿಸಲು ಹಲವಾರು ಮಹನೀಯರು ಕರ್ನಾಟಕ ಏಕೀಕರಣದ ಹೋರಾಟ ಮಾಡಿದ್ದರಿಂದ ಇಂದು ನಾವು ಅಖಂಡ ಕರ್ನಾಟಕ ರಾಜ್ಯ ಕಾಣಲು ಸಾಧ್ಯವಾಗಿದೆ. ಇಂದು ಹಲವಾರು ಅನ್ಯ ಭಾಷೆಗಳಿಗೆ ಪ್ರಾಮುಖ್ಯತೆ ಕೊಡುವ ಮೊದಲು ನಮ್ಮ ಮಾತೃ ಭಾಷೆ ಕನ್ನಡಕ್ಕೆ ಮೊದಲು ಆದ್ಯತೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಯಲಿಗಾರ, ತಹಸೀಲ್ದಾರ್‌ ಶ್ರೀಶೈಲ ತಳವಾರ, ಶಿಕ್ಷಣಾಧಿಕಾರಿ ಡಾ.ಹೂಗಾರ, ನಿವೃತ್ತ ಕನ್ನಡ ಉಪನ್ಯಾಸಕ ಎಂ.ಎಸ್. ಯಾವಗಲ್, ತಾಪಂ ಅಧಿಕಾರಿ ಎಸ್.ಕೆ. ಇನಾಮದಾರ, ಪುರಸಭೆ ಅಧಿಕಾರಿ ಪಿ.ಕೆ. ಗುಡದಾರಿ, ಸಿಪಿಐ ಮಂಜುನಾಥ ನಡುವಿನಮನಿ, ಸಿದ್ದಪ್ಪ ಯಲಿಗಾರ, ಕರವೇ ತಾಲೂಕಾಧ್ಯಕ್ಷ ನಬಿಸಾಬ್‌ ಕಿಲ್ಲೇದಾರ, ಮುತ್ತು ರಾಯರಡ್ಡಿ, ಎನ್.ಆರ್. ನಿಡಗುಂದಿ, ಶಿಕ್ಷಕ ಎಂ.ಡಿ. ಪಾಟೀಲ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ