
ಕನ್ನಡಪ್ರಭ ವಾರ್ತೆ ತುಮಕೂರು
ತುಮಕೂರಿನ ಅಗಳಕೋಟೆಯ ಡಾ. ಎಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಎಸ್ಐಆರ್: ಇದು ಮತದಾರರ ಪಟ್ಟಿ ಪರಿಷ್ಕರಣೆಯಲ್ಲ, ಮತಾಧಿಕಾರ ಹರಣ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. ಮತದಾನದ ಹಕ್ಕು ಕಳೆದುಕೊಂಡರೆ ಸರ್ಕಾರದ ಸವಲತ್ತುಗಳು ಸಿಗುವುದಿಲ್ಲ ಎಂದ ಅವರು ಅಹಿಂದ ವರ್ಗ ಮತ್ತೆ ಸಂಕಷ್ಟಕ್ಕೆ ಸಿಲುಕಿಕೊಳ್ಳಬಾರದು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಹೇಳಿದರು.
ಶೇ.50ರಷ್ಟು ಜನರಿಗೆ ಮಾತ್ರ ಎಸ್ಐಆರ್ ಮಹತ್ವ ಅರ್ಥವಾಗಿದೆ. ಎಸ್ಐಆರ್ ಪ್ರಕ್ರಿಯೆಯನ್ನು ಪ್ರಾಮಾಣಿಕವಾಗಿ ನಡೆಸುವಂತೆ ಮುಖ್ಯಮಂತ್ರಿ ಪ್ರತಿ ಸಭೆಯಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.ಲಕ್ಷಾಂತರ ಇನ್ಯೂಮರೇಶನ್ ಫಾರ್ಮ್ ಗಳನ್ನು ಭರ್ತಿ ಮಾಡಿ ವಾಪಸ್ ಕೊಟ್ಟಿಲ್ಲ. ಪಶ್ಚಿಮ ಬಂಗಾಳದಲ್ಲಿ 97 ಲಕ್ಷ ಮತದಾರರನ್ನು ಬಿಟ್ಟಿದ್ದಕ್ಕೆ, ಮಮತಾ ಬ್ಯಾನರ್ಜಿ ಅವರ ಪಕ್ಷ ಸೋಲನ್ನು ಅನುಭವಿಸಿತು. ಎಸ್ಐಆರ್ನ ಗಾಂಭೀರ್ಯತೆ ಈಗ ಅರ್ಥವಾಗುವುದಿಲ್ಲ. ಕೆಲವು ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ತೆಗೆದು ಹಾಕುವುದು ಅಷ್ಟರ ಮಟ್ಟಿಗೆ ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಬಿಜೆಪಿ ಉದ್ದೇಶ ಯಶಸ್ವಿಯಾಗಿಲ್ಲ. ಆದಾಗ್ಯೂ 1.7 ಕೋಟಿ ಮತದಾರರು ಲೆಕ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದರು.
2029 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು, ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲೇಬೇಕು. ಕೇಂದ್ರದಲ್ಲಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಬರುತ್ತದೆ. ಹೀಗಾಗಿ ಎಸ್ಐಆರ್ ಪ್ರಾಮುಖ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ಎಚ್ಚರಿಕೆ ವಹಿಸಿ ಕನಿಷ್ಠ 50 ಲಕ್ಷ ಮತದಾರರನ್ನು ವಾಪಸ್ ಸೇರಿಸುವ ಕೆಲಸ ಮಾಡಿದರೆ ಉತ್ತಮ ಎಂದು ತಿಳಿಸಿದರು.