ಮುಂಡರಗಿ: ಹೊತ್ತು, ಹೆತ್ತು, ಸಾಕಿ, ಸಲುಹಿದ ತಾಯಿಯ ಋಣವನ್ನು ತೀರಿಸುವುದು ಬಹುಮುಖ್ಯವಾಗಿದೆ. ತಾಯಿಯನ್ನು ಸ್ಮರಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಡಾ. ಅನ್ನದಾನೀಶ್ವರ ಸ್ವಾಮೀಜಿ ತಿಳಿಸಿದರು.
ಶಿಕ್ಷಕ, ಸಾಹಿತಿ ಡಾ. ನಿಂಗು ಸೊಲಗಿ ಮಾತನಾಡಿ, ತಾಯಿ ಎಂದರೆ ನಮಗೆಲ್ಲರಿಗೂ ದೇವ ಸ್ವರೂಪಿ. ಕಣ್ಣಿಗೆ ಕಾಣುವ ದೇವರೆಂದರೆ ಅದು ತಾಯಿ ಮಾತ್ರ. ಪ್ರತಿಕ್ಷಣ ಪ್ರೀತಿ ಮತ್ತು ಗೌರವವನ್ನು ತೋರಿಸಿ ಬೆಳೆಸುವವರು ಯಾರಾದರೂ ಇದ್ದರೆ ಅದು ತಾಯಿ ಮಾತ್ರ ಎಂದರು.
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಧಾರವಾಡ ಕೆಎಂಎಫ್ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಮಾತನಾಡಿದರು. ಪ್ರತಿಷ್ಠಾನದ ಅಧ್ಯಕ್ಷ ನಾಗರಾಜ ಮುರುಡಿ ಅಧ್ಯಕ್ಷತೆ ವಹಿಸಿದ್ದರು. ವೈ.ಎನ್. ಗೌಡರ, ಸಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ರವೀಂದ್ರ ಉಪ್ಪಿನಬೆಟಗೇರಿ, ದೇವಪ್ಪ ಕಂಬಳಿ, ಹೇಮಗಿರೀಶ ಹಾವಿನಾಳ, ಎಸ್.ಡಿ. ಮಕಾಂದಾರ, ರವೀಂದ್ರ ಉಪ್ಪಿನಬೆಟಗೇರಿ, ಎಸ್.ವಿ. ಪಾಟೀಲ, ಬಿ.ವಿ. ಮುದ್ದಿ ಪಾಲ್ಗೊಂಡಿದ್ದರು.7ರಂದು ಮಹರ್ಷಿ ವಾಲ್ಮೀಕಿ ಜಯಂತಿನರಗುಂದ: ಪಟ್ಟಣದ ಪುರಸಭೆ ಆವರಣದಲ್ಲಿ ಅ. 7ರಂದು ಮಧ್ಯಾಹ್ನ 12 ಗಂಟೆಗೆ ಕಂದಾಯ ಇಲಾಖೆ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ವಾಲ್ಮೀಕಿ ಸಂಘದ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಜರುಗಲಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉಪಸ್ಥಿತರಿರುವರು.ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಮುಖ್ಯ ಸಚೇತಕ, ಶಾಸಕ ಸಲೀಮ್ ಅಹ್ಮದ್, ಬಾಗಲಕೋಟೆ ಲೋಕಸಭೆ ಸದಸ್ಯ ಪಿ.ಸಿ. ಗದ್ದಿಗೌಡರ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಪುರಸಭೆ ಅಧ್ಯಕ್ಷೆ ನೀಲಮ್ಮ ಪವಾಡೆಪ್ಪ ವಡ್ಡಿಗೇರಿ, ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಹಾಗೂ ತಹಸೀಲ್ದಾರ್ ಶ್ರೀಶೈಲ ತಳವಾರ, ತಾಪಂ ಅಧಿಕಾರಿ ಎಸ್.ಕೆ. ಇನಾಮದಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಂ. ಬಡಿಗೇರ, ಪುರಸಭೆ ಅಧಿಕಾರಿ ಸಂಗಮೇಶ ಬ್ಯಾಳಿ, ಸಿಪಿಐ ಮಂಜುನಾಥ ನಡುವಿನಮನಿ, ತಾಲೂಕು ವಾಲ್ಮೀಕಿ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಹಸೀಲ್ದಾರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.