ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನಲ್ಲಿ ಜೆಡಿಎಸ್ ಪಡೆ ಬಲಿಷ್ಠವಾಗಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತದಾರರ ಮನವೊಲಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು. ಕೆಳಹಂತದ ಕಾರ್ಯಕರ್ತರ ಮಾತಿಗೆ ಮನ್ನಣೆ ನೀಡಬೇಕು ಎಂದು ಮುಖಂಡರಿಗೆ ಸಲಹೆ ನೀಡಿದರು.
ಸಭೆಯಲ್ಲಿ ಸಹಕಾರ ಮಹಾ ಮಂಡಳದ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ದಿಶಾ ಸಮಿತಿ ಸದಸ್ಯ ನರಸ ನಾಯಕ, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ, ತಾಪಂ ಮಾಜಿ ಸದಸ್ಯರಾದ ಸಂಜೀವಪ್ಪ ಮಲ್ಲೇನಹಳ್ಳಿ ಮೋಹನ್, ಮುಖಂಡರಾದ ಅಕ್ಕಿಹೆಬ್ಬಾಳು ಶ್ರೀನಿವಾಸ್ ತೋಟಪ್ಪಶೆಟ್ಟಿ, ಸಂತೆಬಾಚಹಳ್ಳಿರವಿ, ಬಲ್ಲೇನಹಳ್ಳಿ ನಂದೀಶ್, ನಾಟನಹಳ್ಳಿಮಹೇಶ್, ಗುತ್ತಿಗೆದಾರ ಬಲರಾಮ್, ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.ಮಾ.೧ರಿಂದ ಶ್ರೀ ಶನೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ತಾಲೂಕಿನ ಕಚ್ಚೀಗೆರೆ ಗ್ರಾಮದ ಶ್ರೀಶನೇಶ್ವರ ಸ್ವಾಮಿ ದೇವಸ್ಥಾನದಿಂದ ಜಾತ್ರಾ ಮಹೋತ್ಸವವನ್ನು ಮಾ.೧ ಮತ್ತು ೨ರಂದು ಏರ್ಪಡಿಸಲಾಗಿದೆ.
ಮಧ್ಯಾಹ್ನ ೨ ರಿಂದ ೫ ಗಂಟೆಯವರೆಗೆ ವೈಭವ ಮಹಾಲಕ್ಷ್ಮೀ ಪೂಜೆ, ಸಂಜೆ ೫ ರಿಂದ ೭.೩೦ರವರೆಗೆ ವಿವಿಧ ವೀರಗಾಸೆ ವಾದ್ಯ ಮೆರವಣಿಗೆ ಮೂಲಕ ಮೀಸಲು ನೀರು ತರುವುದು. ಸಂಜೆ ೬ ಗಂಟೆಯಿಂದ ರಾತ್ರಿ ೧೧.೩೦ರ ವರೆಗೆ ಕಚ್ಚೀಗೆರೆಯ ಶ್ರೀವಿನಾಯಕ ಗೆಳೆಯರ ಬಳಗದಿಂದ ಸುಗಮ ಸಂಗೀತ ಭಕ್ತಿ ಗೀತೆಗಳು, ಗಿಚ್ಚಿ ಗಿಲಿಗಿಲಿ ಹಾಸ್ಯ ಕಲಾವಿದರಾದ ಚಂದ್ರಪ್ರಭ. ವಿನೋದ್ ಅವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.