-ಯಾದಗಿರಿ ನಗರಸಭೆಯಲ್ಲಿ ಆಶ್ರಯ ಸಮಿತಿ ಸದಸ್ಯರಿಗೆ ಸನ್ಮಾನ ಸಮಾರಂಭ
ಕನ್ನಡಪ್ರಭ ವಾರ್ತೆ ಯಾದಗಿರಿ
ಅಭಿವೃದ್ಧಿಗೆ ಮೊದಲಾದ್ಯತೆ ನೀಡಲಾಗಿದ್ದು, ನಗರಾಭಿವೃದ್ಧಿಗಾಗಿ ನಗರಸಭೆ ಎಲ್ಲ ಸದಸ್ಯರು ಒಂದುಗೂಡಿ ಕೆಲಸ ಮಾಡಬೇಕೆಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.ನಗರಸಭೆಯಲ್ಲಿ ಆಶ್ರಯ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ನಗರಸಭೆಗೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಜಾರಿಗೊಳಿಸಲು ಬೇಕಾದ ಅನುಕೂಲ ಪಡೆಯಲು ಸಿಎಂ ಸಿದ್ಧರಾಮಯ್ಯ ಅವರಿಗೆ ನಗರಸಭೆ ಅಧ್ಯಕ್ಷರ ನೇತ್ವತೃದಲ್ಲಿ ಒಂದು ನಿಯೋಗ ಬೆಂಗಳೂರಿಗೆ ಬನ್ನಿ, ನಾನು, ಅವರ ಸಮಯ ನಿಗದಿಪಡಿಸಿ ಭೇಟಿಯಾಗೊಣ ಎಂದರು.
ಪೌರಾಯುಕ್ತ ಉಮೇಶ ಚವ್ಹಾಣ ಸ್ವಾಗತಿಸಿ, ನಿರೂಪಿಸಿದರು. ಎಂಜಿನೀಯರ್ ರಜನೀಕಾಂತ ಆಶ್ರಯ ಸಮಿತಿ ಸ್ಥಳ ಮತ್ತು ಕೆಲಸದ ಬಗ್ಗೆ ವಿವರಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ್ ಮಾಲಿ ಪಾಟೀಲ್, ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ, ವೆಂಕಟರೆಡ್ಡಿ ವನಿಕೇರಿ, ಚೆನ್ನಕೇಶವ ಬಾಣತಿಹಾಳ, ಹಣಮಂತ ನಾಯಕ್, ಪ್ರಭಾವತಿ ಕಲಾಲ, ಆಶ್ರಯ ಸಮಿತಿ ನೂತನ ಸದಸ್ಯರಾದ ಪ್ರಭಾಕರ್ ಜಿ., ಆರತಿ ಅಮರೇಶ ಜಾಕಾ, ಶಿವರಾಜ ಕರದಳ್ಳಿ, ಇಮ್ಯಾನುವೆಲ್ ಕ್ರಿಸ್ಟೋಫರ್ ಸೇರಿದಂತೆ ನಗರಸಭೆ ಅಧಿಕಾರಿಗಳು ಇದ್ದರು.------
ಫೋಟೋ: ಯಾದಗಿರಿ ನಗರಸಭೆಯಲ್ಲಿ ಆಶ್ರಯ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಮಾತನಾಡಿದರು.1ವೈಡಿಆರ್4