ಗದಗ: ಮಾತು ಬಲ್ಲವನಿಗೆ ಜಗಳವಿಲ್ಲ, ಕಾನೂನು ಬಲ್ಲವನಿಗೆ ವ್ಯಾಜ್ಯವಿಲ್ಲ ಎಂಬ ಮಾತಿದೆ. ದೇಶದ ಕಾನೂನು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಿರಿಯ ವಕೀಲ ವೈ.ಡಿ. ತಳವಾರ ಹೇಳಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನಸಾಮಾನ್ಯರಿಗಾಗಿ ಕಾನೂನು ಮಾಹಿತಿ ಪುಸ್ತಕ ಪ್ರಕಟಿಸಿದೆ. ಅತ್ಯಂತ ಕಡಿಮೆ ಬೆಲೆಗೆ ಮಾರಾಟಕ್ಕೆ ಇದು ಲಭ್ಯವಿದೆ. ಪ್ರತಿಯೊಬ್ಬರೂ ಇದನ್ನು ಖರೀದಿಸಿ ಕಾನೂನಿನ ಸಂಕ್ಷಿಪ್ತ ಜ್ಞಾನ ಪಡೆದುಕೊಂಡು, ಇತರರಿಗೂ ತಿಳಿಸಬೇಕು. ಕಾನೂನು ತಿಳಿವಳಿಕೆ ಪ್ರತಿಯೊಬ್ಬರಿಗೂ ಇರಬೇಕಾದದು ಆವಶ್ಯಕ. ಅದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಲಭಿಸುತ್ತದೆ. ಕಾನೂನು ಅರಿವಿಲ್ಲದಿದ್ದರೆ ಜನಸಾಮಾನ್ಯರು ತೊಂದರೆ ಸಿಲುಕಬೇಕಾಗುತ್ತದೆ ಎಂದು ಹೇಳಿದರು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನ ಹಾಗೂ ಮಧ್ಯಸ್ಥಿಕೆ ಮೂಲಕ ಪರಿಹರಿಸಿಕೊಂಡರೆ ಕಕ್ಷಿದಾರರರಿಗೆ ಹಣ, ಸಮಯ ಉಳಿಯುತ್ತದೆ ಎಂದರು.
ಈ ವೇಳೆ ವಕೀಲ ಯಲ್ಲಪ್ಪ ಕುರಹಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಶಾಲಾಭಿವೃದ್ಧಿ ಹಾಗೂ ವ್ಯವಸ್ಥಾಪನೆ ಸಮಿತಿ ಸದಸ್ಯರು, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಪ್ರೊ. ಬಾಹುಬಲಿ ಪಿ. ಜೈನರ, ದೈಹಿಕ ಶಿಕ್ಷಣ ಶಿಕ್ಷಕ ಅಂಗಡಿ, ವಿದ್ಯಾರ್ಥಿ ಮುಖಂಡ ಮನೋಜ್ ದಲಬಂಜನ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ಸೇವಕರು ಇದ್ದರು.