ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 227ನೇ ವಿಶೇಷ ಮದ್ಯವರ್ಜನ ಶಿಬಿರದ 86 ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹವಾಮಾನ, ಕಾಲಮಾನಕ್ಕೆ ಸರಿಯಾಗಿ ನಾವು ಜೀವನ ಮಾಡಬೇಕು. ಆದರೆ ಕುಡಿತಕ್ಕೆ ಯಾವ ಕಾಲಮಾನವೂ ಇಲ್ಲ. ಎಲ್ಲಾ ಕಾಲಮಾನದಲ್ಲೂ ಅದರ ಸೇವನೆ ಮಾಡ್ತಾರೆ. ಇದೊಂದು ಕೇವಲ ಆಕರ್ಷಣೀಯ ವಸ್ತುವಾಗಿದೆ. ಆದುದರಿಂದ ಚಂಚಲತೆಯನ್ನು ಹತೋಟಿ ಮಾಡುವುದನ್ನು ಕಲಿಯಬೇಕು ಎಂದರು.ಕಾರ್ಯಕ್ರಮದ ಸಮಾರೋಪ ಸಮಾರಂಭದಂದು ಯೋಜನೆಯ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್. ಮಂಜುನಾಥ್ ನವಜೀವನ ಸಮಿತಯ ಉದ್ಘಾಟನೆ ನೆರವೇರಿಸಿದರು.
ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯ್ಸ್ ನಡೆಸಿಕೊಟ್ಟರು. ಯೋಜನಾಧಿಕಾರಿ ಮಾಧವಗೌಡ, ಶಿಬಿರಾಧಿಕಾರಿಗಳಾದ ನಾಗೇಂದ್ರ ಎಚ್.ಎಸ್, ಆರೋಗ್ಯ ಸಹಾಯಕಿ ಸೌಮ್ಯ, ಪ್ರಬಂಧಕರಾದ ಕಿಶೋರ್ ಸಹಕರಿಸಿದರು.