ಮಾ.7,8ರಂದು ಬಂಟ್ವಾಳದಲ್ಲಿ ಮೂಡೂರು ಪಡೂರು ಕಂಬಳ

KannadaprabhaNewsNetwork |  
Published : Mar 01, 2026, 03:30 AM IST
ಮಾರ್ಚ್ 7-8 ಬಂಟ್ವಾಳದಲ್ಲಿ 15ನೇ ವರ್ಷದ ಮೂಡೂರು ಪಡೂರು ಕಂಬಳಸಿಎಂ ಸಿದ್ಧರಾಮಯ್ಯ ಸಹಿತ ಹಲವು ಸಚಿವರು ಭಾಗಿ, ಮೇಳೈಸಲಿದೆ ಆಹಾರ ಮೇಳ | Kannada Prabha

ಸಾರಾಂಶ

ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಮಾ. 7 ಮತ್ತು 8ರಂದು ನಾವೂರ ಕೂಡಿಬೈಲು ಎಂಬಲ್ಲಿನ ಮೂಡೂರು -ಪಡೂರು ಜೋಡುಕರೆಯಲ್ಲಿ 15ನೇ ವರ್ಷದ ‘ಬಂಟ್ವಾಳ ಕಂಬಳ’ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್‍ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ ಹೇಳಿದರು

ಬಂಟ್ವಾಳ: ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಮಾ. 7 ಮತ್ತು 8ರಂದು ನಾವೂರ ಕೂಡಿಬೈಲು ಎಂಬಲ್ಲಿನ ಮೂಡೂರು -ಪಡೂರು ಜೋಡುಕರೆಯಲ್ಲಿ 15ನೇ ವರ್ಷದ ‘ಬಂಟ್ವಾಳ ಕಂಬಳ’ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್‍ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ ಹೇಳಿದರು.ಬಿಸಿರೋಡಿನಲ್ಲಿ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಬೆಳಗ್ಗೆ 8.45ಕ್ಕೆ ಉದ್ಘಾಟನಾ ಸಮಾರಂಭದಲ್ಲಿ ಸೋಲೂರು ಮಹಾ ಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಬಾರ್ಕೂರು ಮಹಾ ಸಂಸ್ಥಾನದ ಶ್ರೀ ವಿದ್ಯಾವಾಚಸ್ಪತಿ ಡಾ. ಸಂತೋಷ್ ಗುರೂಜಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ, ಅಲ್ಲಿಪಾದೆ ಚರ್ಚ್‌ ಧರ್ಮಗುರು ವಂ. ರಾಬರ್ಟ್ ಡಿಸೋಜ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಸರಗೋಡು ಲೋಕಸಭಾ ಸದಸ್ಯ ರಾಜ್ ಮೋಹನ್ ಉನ್ನಿತಾನ್, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ಮುಖ್ಯ ಸಚೇತಕ ಸಲೀಮ್ ಆಹಮ್ಮದ್ ಸಹಿತ ಅನೇಕ ಸಚಿವರು, ಧಾರ್ಮಿಕ, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಬಂಟ್ವಾಳ ಕಂಬಳ ಎಂಬುದು ಹಬ್ಬದ ರೀತಿಯಲ್ಲಿ ಆಚರಣೆಯಾಗಬೇಕು ಎಂಬ ನಿಟ್ಟಿನಲ್ಲಿ ಹಲವು ವಿಶೇಷತೆಗಳೊಂದಿಗೆ ಕಂಬಳ ನಡೆಯಲಿದೆ ಎಂದ ಅವರು, ಮೂಡೂರು- ಪಡೂರು ಕಂಬಳ ವಿಶೇಷತೆ ಜೊತೆ ಹೊಸತನದೊಂದಿಗೆ ಕಳೆದ 15 ವರ್ಷಗಳಿಂದ ನಡೆಯುತ್ತಾ ಬಂದಿದೆ. ಬಹು ಬೇಡಿಕೆಯ ಸಿನಿ ತಾರೆಗಳು, ರಾಜಕೀಯ, ಸಾಮಾಜಿಕ ನೇತಾರರು ಕಂಬಳಕ್ಕೆ ಆಗಮಿಸಿ ಮೆರುಗು ನೀಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದ್ದು, ಮೂಡೂರು- ಪಡೂರು ಕಂಬಳಕ್ಕೆ ಸರಸಾಟಿಯಾಗಿರುವ ಇನ್ನೊಂದು ಕಂಬಳ ಇಲ್ಲ ಎಂಬ ರೀತಿಯಲ್ಲಿ ಆಯೋಜನೆ ಮಾಡುತ್ತಾ ಬಂದಿದ್ದೇವೆ ಎಂದರು. ಕಂಬಳ ಕ್ಕೆ ಪೂರಕವಾಗಿ ಶಾಶ್ವತ ವೇದಿಕೆಯನ್ನು ನಿರ್ಮಾಣ ಮಾಡಲಾಗಿದ್ದು, ಸುಸಜ್ಜಿತ ವ್ಯವಸ್ಥೆಯೊಂದಿಗೆ ಕಂಬಳಕ್ಕೆ ಬಂದು ಹೋಗುವ ಅಭಿಮಾನಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ, ಒತ್ತಾಯದ ಮೇರೆಗೆ ಪಾಂಗೋಡಿ ಎಂಬಲ್ಲಿಂದ ಹೊಸ ರಸ್ತೆಯನ್ನು ನಿರ್ಮಿಸಲಾಗಿದೆ. ವಾಹನ ಪಾರ್ಕಿಂಗ್ ಗಾಗಿ ಆ ಭಾಗದ ಎಲ್ಲ ಗದ್ದೆಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಈ ಬಾರಿಯ ಹೊಸತನ ಎಂಬಂತೆ ಕಂಬಳ ಕೂಟದ ವೇಳೆ ಆಹಾರ ಮೇಳವನ್ನು ಹಮ್ಮಿಕೊಂಡಿದ್ದೇವೆ ಎಂದರು.ಕಂಬಳ ಸಮಿತಿ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್‌ ಶೆಟ್ಟಿ, ಸಂಚಾಲಕ ಬಿ. ಪದ್ಮಶೇಖರ ಜೈನ್, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಫಿಲಿಪ್ ಪ್ರೇಂಕ್, ಉಪಾಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸುದರ್ಶನ ಜೈನ್, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಅಬ್ಬಾಸ್ ಆಲಿ, ಪ್ರಮುಖರಾದ ಇಬ್ರಾಹಿಂ ನವಾಝ್ ಬಡಕಬೈಲ್ , ಶೈಲೇಶ್ ಪೂಜಾರಿ ಹಾಗೂ ಕಂಬಳ ಸಮಿತಿಯ ನಾನಾ ಪದಾಧಿಕಾರಿಗಳು, ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಂಚನೆಗೆ ಬ್ಯಾಂಕ್ ಖಾತೆ ಬಳಕೆ: ಅಂತಾರಾಜ್ಯ ಸೈಬರ್ ಕ್ರೈಂ ಜಾಲ ಬಯಲು
ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು: ಟಿ.ಎಂ. ಶಾಹೀದ್