ಕನ್ನಡಪ್ರಭ ವಾರ್ತೆ ಹನೂರು
ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡು ಜಿದ್ದಾಜಿದ್ದಿನಿಂದ ಮತ ಭರ್ಜರಿ ಮತ ಪ್ರಚಾರ ನಡೆಸಿದ್ದರು. ಹಾಲಿ ನಿರ್ದೇಶಕ ಆರ್.ನರೇಂದ್ರರನ್ನು ಶತಾಯಗತಾಯ ಸೋಲಿಸಲೇಬೇಕೆಂದು ಹಾಲಿ ಶಾಸಕ ಎಂ.ಆರ್.ಮಂಜುನಾಥ್, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್, ಬಿಜೆಪಿ ಮುಖಂಡ ನಿಶಾಂತ್ ಹಗಲಿರುಳು ಶ್ರಮಿಸಿದ್ದರು. ಆದರೆ ಮತದಾರ ಇವರೆಲ್ಲರನ್ನು ತಿರಸ್ಕರಿಸಿ ಮಾಜಿ ಶಾಸಕ ಆರ್.ನರೇಂದ್ರ ಅವರ ಕೈ ಬಲಪಡಿಸುವ ಮೂಲಕ ಇದು ಮತ್ತೊಮ್ಮೆ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಲ್ಲಿ 274 ಮತದಾರರಿದ್ದು 270 ಮತದಾರರು ಮತ ಚಲಾವಣೆ ಮಾಡಿದ್ದರು. ಈ ಪೈಕಿ ಹಾಲಿ ನಿರ್ದೇಶಕ ಆರ್ ನರೇಂದ್ರ 171, ಮೈತ್ರಿ ಪಕ್ಷದ ಅಭ್ಯರ್ಥಿ ಎಸ್ ಗಿರೀಶ್ 97 ಮತಗಳನ್ನು ಪಡೆದು ಆರ್ ನರೇಂದ್ರ ವಿರುದ್ಧ ಗಿರೀಶ್ ಎರಡನೇ ಸ್ಥಾನ ಪಡೆದು ಸೋಲು ಅನುಭವಿಸಿದ್ದಾರೆ. ಇಬ್ಬರು ಮತದಾರರು ಮತ ಚಲಾವಣೆ ಮಾಡುವಾಗ ಹೆಬ್ಬೆಟ್ಟು ಒತ್ತಿರುವುದರಿಂದ ಎರಡು ಮತಗಳು ತಿರಸ್ಕೃತಗೊಂಡಿದೆ.ಮಾತಿನ ಚಕಮಕಿ ವಾಗ್ವಾದ:
ಭಾರಿ ಪೊಲೀಸ್ ಬಿಗಿ ಪಹರೆ:
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಒಬ್ಬರೇ ನಾಯಕರು. ಆದರೆ ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ, ಬಿಜೆಪಿ ಮುಖಂಡರಾದ ಡಾ.ದತ್ತೇಶ್ ಕುಮಾರ್, ನಿಶಾಂತ್, ವೆಂಕಟೇಶ್ ಅವರ ನಾಲ್ಕು ಬಣಗಳಿವೆ. ಆದರೆ ಏಕ ಪಕ್ಷಿಯವಾಗಿ ಡಾ.ದತ್ತೇಶ್ ಕುಮಾರ್ ನಿಶಾಂತ್ ಮಾತ್ರ ಈ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು. ಉಳಿದಂತೆ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಜನಧ್ವನಿ ವೆಂಕಟೇಶ್ ಚುನಾವಣೆಯ ಯಾವುದೇ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರಲಿಲ್ಲ. ಇದು ಸಹ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಸಾಲಗಾರರಲ್ಲದ ಕ್ಷೇತ್ರದಿಂದ ಬೆಳತ್ತೂರು ಗ್ರಾಮದ ಅಂಗವಿಕಲ 70 ವರ್ಷದ ರಾಜಮ್ಮ, ಗೂಳ್ಯ ಗ್ರಾಮದ 104 ವರ್ಷದ ಲಿಂಗರಾಜಮ್ಮ ಮತ ಚಲಾಯಿಸುವ ಮೂಲಕ ಗಮನ ಸೆಳೆದರು. ಸತತವಾಗಿ ಕಳೆದ ಮೂರು ಅವಧಿಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಜಿದ್ದಾಜಿದ್ದಿಯ ನಡುವೆ ನಡೆದ ಚುನಾವಣೆಯಲ್ಲಿ ಮಾಜಿ ಶಾಸಕ ನರೇಂದ್ರ ಗೆಲುವು ಸಾಧಿಸುವ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳ ಮುಖಂಡರಿಗೆ ಸೆಡ್ಡು ಹೊಡೆದು ಗೆಲುವು ಸಾಧಿಸಿದ್ದಾರೆ.
ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದಿಂದ ಮಾಜಿ ಶಾಸಕ ಆರ್ ನರೇಂದ್ರ, ಪಕ್ಷದ ಮುಖಂಡರು, ಕಾರ್ಯಕರ್ತರು ರೈತ ಬಾಂಧವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಸಾಲಗಾರರ ಕ್ಷೇತ್ರದ ಶಾಂತಿಯುತ ಮತದಾನ: