ಕನ್ನಡಪ್ರಭ ವಾರ್ತೆ ಮಡಿಕೇರಿ
ಮಾಜಿ ಸೈನಿಕರ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲ ಶಾಸಕರು, ಉಸ್ತುವಾರಿ ಸಚಿವರು ಆಹ್ವಾನಿಸಲಾಗುತ್ತಿದೆ. ಸಮಾರೋಪ ಸಮಾರಂಭಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಆಹ್ವಾನಿಸಿ, ಅವರಿಂದ ಬಹುಮಾನ ವಿತರಣೆ ಮಾಡಬೇಕೆಂದು ಉದ್ದೇಶಿಸಲಾಗಿದೆ ಎಂದು ಸೋಮಣ್ಣ ತಿಳಿಸಿದರು.
ನಾವೆಲ್ಲರು ಒಂದೇ : ಭಾರತೀಯ ಸೈನ್ಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿರುವ ಎಲ್ಲರೂ ಒಂದೇ, ಈ ಹಿನ್ನೆಲೆಯಲ್ಲಿ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ಮಾಜಿ ಯೋಧರ ಸಂಘಟನೆಗಳಿಗೆ ಆಹ್ವಾನವನ್ನು ನೀಡಲಾಗಿದೆ. ಎಲ್ಲಾ ಮಾಜಿ ಯೋಧರು, ಅರೆ ಸೇನಾ ಪಡೆಯ ಯೋಧರು ಮತ್ತು ಅವರ ಕುಟುಂಬಸ್ಥರು ಪಾಲ್ಗೊಳ್ಳುವಂತೆ ಕೋರಿದರು.ಎಸ್ಬಿಐ ಸೇರಿದಂತೆ ವಿವಿಧ ಸಂಸ್ಥೆಗಳು ಕ್ರೀಡಾಕೂಟದ ಸಂದರ್ಭ, ಮಾಜಿ ಸೈನಿಕರಿಗೆ ಸಂಬಂಧಿಸಿದಂತೆ, ಅವುಗಳ ವ್ಯಾಪ್ತಿಯಲ್ಲಿ ಬರುವ ಯಾವುದೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಯತ್ನ ನಡೆಸಲಿವೆ. ಜಿಲ್ಲೆಯ ಬಹುತೇಕ ಮಾಜಿ ಯೋಧರ ಪಿಂಚಣಿ ಎಸ್ಬಿಐ ಮೂಲಕ ಬರುತ್ತದೆ. ಈ ಹಿನ್ನೆಲೆ ಪಿಂಚಣಿ ಕುರಿತ ಸಮಸ್ಯೆಗಳಿದ್ದಲ್ಲಿ ಎಸ್ಬಿಐ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಲು ಅವಕಾಶವಿದೆಯೆಂದು ತಿಳಿಸಿದರು.30 ವಿವಿಧ ಸ್ಪರ್ಧೆಗಳು : ಮಾಜಿ ಸೈನಿಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಕ್ರೀಡಾಕೂಟದ ಸಂಚಾಲಕ
ಮಾಜಿ ಯೋಧರ ಸಂಘ ಅರೆ ಸೇನಾಪಡೆಯ ಸಂಚಾಲಕರಾದ ನೂರೇರ ಭೀಮಯ್ಯ ಮಾತನಾಡಿ, ಇಲ್ಲಿಯವರೆಗೆ ಇಂತಹ ಯಾವುದೇ ಕ್ರೀಡಾಕೂಟಗಳಿಗೆ ಅರೆಸೇನಾಪಡೆಯ ನಿವೃತ್ತ ಯೋಧರನ್ನು ಯಾವುದೇ ಸಂಘಟನೆಗಳು ಆಹ್ವಾನಿಸಿರಲಿಲ್ಲ.
ಇದೇ ಮೊದಲ ಬಾರಿಗೆ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘದ ಕೊಡಗು ಘಟಕ ತಮ್ಮನ್ನು ಆಹ್ವಾನಿಸಿರುವ ಬಗ್ಗೆಮೆಚ್ಚುಗೆ ವ್ಯಕ್ತಪಡಿಸಿ, ಕ್ರೀಡಾಕೂಟದ ಯಶಸ್ಸಿಗೆ ಪೂರ್ಣ ಸಹಕಾರ ನಿಡುವುದಾಗಿ ಸ್ಪಷ್ಟಪಡಿಸಿದರು. ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟ್, ಮಾಜಿ ಯೋಧರು ಹಾಗೂ ಕ್ರೀಡಾ ಸಂಚಾಲಕರಾದ ಹೊಸೊಕ್ಕು ಚಿಣ್ಣಪ್ಪ ಮಾತನಾಡಿ, ಸಂಘದ ಮೂಲಕ ಸೈನ್ಯ ಸೇರ್ಪಡೆ ಬಯಸುವ ಮಕ್ಕಳಿಗೆ ತರಬೇತಿ, ಮಾಜಿ ಯೋಧರ ಸಂಕಷ್ಟಗಳ ಪರಿಹಾರಕ್ಕೆ ಸಂಘದ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಬರಲಾಗುತ್ತಿದೆ ಎಂದರು.ಅಂತಾರಾಷ್ಟ್ರೀಯ ಕ್ರೀಡಾಪಟು ಮುಲ್ಲೇರ ಪೊನ್ನಮ್ಮ ಮಾತನಾಡಿ, ಸಂಘದಿಂದ ಮಾಜಿ ಸೈನಿಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದರು. ಸಂಘದ ಕಾರ್ಯದರ್ಶಿ ಚೋವಂಡ ತಿಮ್ಮಯ್ಯ ಸುದ್ದಿಗೋಷ್ಠಿಯಲ್ಲಿದ್ದರು.