ಪರೀಕ್ಷೆ ವಿದ್ಯಾರ್ಥಿಗಳಿಗೆ ವಿಜಯದ ಮೆಟ್ಟಿಲು: ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ

KannadaprabhaNewsNetwork |  
Published : Dec 30, 2024, 01:01 AM IST
564564 | Kannada Prabha

ಸಾರಾಂಶ

ವಿದ್ಯಾರ್ಥಿಗಳು ಪರೀಕ್ಷೆಯನ್ನು ಲಘುವಾಗಿ ಪರಿಗಣಿಸಬಾರದು. ಅಧ್ಯಯನ ಮಾಡುವಾಗ ಪ್ರಾಮಾಣಿಕತೆ, ನಿರ್ದಿಷ್ಟ ಗುರಿ, ಸಮಯ ಪರಿಪಾಲನೆಯೊಂದಿಗೆ ಅಧ್ಯಯನ ಮಾಡಬೇಕು.

ಧಾರವಾಡ:

ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ವಿಜಯದ ಮೆಟ್ಟಿಲು, ಪರೀಕ್ಷೆಗಳ ಬಗ್ಗೆ ವಿನಾಕಾರಣ ಭಯಪಡದೇ ಸಂಭ್ರಮದಿಂದ ಆನಂದಿಸಬೇಕು ಎಂದು ಖ್ಯಾತ ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಕರ್ನಾಟಕ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲ್ಪಟ್ಟ “ಏಕಾಗ್ರತೆಯ ಅಧ್ಯಯನ ಮಾಡುವುದು ಹೇಗೆ?’ವಿಷಯ ಕುರಿತು ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಲಘುವಾಗಿ ಪರಿಗಣಿಸಬಾರದು. ಅಧ್ಯಯನ ಮಾಡುವಾಗ ಪ್ರಾಮಾಣಿಕತೆ, ನಿರ್ದಿಷ್ಟ ಗುರಿ, ಸಮಯ ಪರಿಪಾಲನೆಯೊಂದಿಗೆ ಅಧ್ಯಯನ ಮಾಡಬೇಕು. ಸಮಯವು ಹಣಕ್ಕಿಂತಲೂ ಬೆಲೆಯುಳ್ಳದ್ದು. ಮನಸ್ಸು ಗೊಂದಲವಿದ್ದಾಗ ಓದಬಾರದು. ಅದು ನಿಮ್ಮ ಏಕಾಗ್ರತೆಗೆ ಭಂಗ ಉಂಟು ಮಾಡುತ್ತದೆ. ಉತ್ತೀರ್ಣತೆಯ ಬಗ್ಗೆ ವಿನಾಕಾರಣ ಭಯಬೇಡ. ನಾನು ಹೆಚ್ಚು ಅಂಕ ಗಳಿಸುತ್ತೇನೆಂಬ ದೃಢ ಸಂಕಲ್ಪವಿರಲಿ. ಇದುವೇ ಆತ್ಮವಿಶ್ವಾಸ ಎಂದರು.

ಡಿಮ್ಹಾನ್ಸ್‌ನ ಪ್ರಶಾಂತ ಪಾಟೀಲ ಉಪನ್ಯಾಸ ನೀಡಿ, ಚಂಚಲ ಚಿತ್ತವಾದ ಮನಸ್ಸನ್ನು ಒಮ್ಮುಖಗೊಳಿಸಿ ಓದಬೇಕು. ನಿಮ್ಮದೇ ಆದ ಯೋಜನೆ ಮುಖ್ಯ. ಓದುವುದನ್ನು ಬಿಟ್ಟು ವಿನಾಕಾರಣ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ನಿರಂತರ ಅಧ್ಯಯನ ಮಾಡದೇ ಅಲ್ಪ ವಿಶ್ರಾಂತಿಗೂ ಸಮಯ ನೀಡಬೇಕು. ಸಾತ್ವಿಕ ಆಹಾರ ಸೇವಿಸಬೇಕೆಂದ ಅವರು, ಏಕಾಗ್ರತೆಗೆ ಭಂಗತರುವ ಸನ್ನಿವೇಶಗಳನ್ನು ತಿರಸ್ಕರಿಸಿರಿ ಪುನರಾವರ್ತನೆ, ಗುಂಪು ಅಧ್ಯಯನದಿಂದ ವಿಷಯದ ಮನನವಾಗುತ್ತದೆ ಎಂದು ವಿದ್ಯಾರ್ಥಿಗಳೊಂದಿಗೆ ಏಕಾಗ್ರತೆ ಕುರಿತು ಸಂವಾದ ನಡೆಸಿದರು.

ವಿಜ್ಞಾನಿ ಶ್ರೀಧರ ಉದಗಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಓದಿಗೆ ಕೊಡುವಷ್ಟು ಗಮನವನ್ನು ಬರವಣಿಗೆಗೂ ಕೊಡಬೇಕು. ನಿಮ್ಮ ಬರವಣಿಗೆ ಮೌಲ್ಯ ಮಾಪಕದ ಮೇಲೆ ಪ್ರಭಾವ ಬೀರುವಂತಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆ.ಇ. ಬೋರ್ಡ್‌ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ ಮಾತನಾಡಿ, ಕವಿವ ಸಂಘ ಈ ನಾಡಿನ ಹೆಮ್ಮೆಯ ಸಂಸ್ಥೆ. ವಿದ್ಯೆಯ ಬೆಳವಣಿಗೆಗಾಗಿ ನಿರಂತರ ೧೩೪ ವರ್ಷಗಳಿಂದ ಶ್ರಮಿಸುತ್ತಿದೆ. ಶಿಕ್ಷಣ ಮಂಟಪದ ಈ ಕಾರ್ಯ ಫಲ ನೀಡಲಿದೆ ಎಂದು ಹೇಳಿದರು.

ಉಪ ಪ್ರಾಚಾರ್ಯ ಎನ್.ಎನ್. ಸವಣೂರ ಸ್ವಾಗತಿಸಿದರು, ಕವಿವ ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕ ಮಾತನಾಡಿದರು. ಶೋಭಾದೇವಿ ನಿರೂಪಿಸಿದರು. ಪದ್ಮಾವತಿ ಅಂಗಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ವ್ಹಿ.ಬಿ. ಶಿಂಗೆ, ಕೆ.ಸಿ. ಪ್ರಕಾಶ, ಲಕ್ಷ್ಮಿ ಪಾಟೀಲ, ವಿಜಯಲಕ್ಷ್ಮಿ ಕಲ್ಯಾಣಶೆಟ್ಟರ, ಪ್ರಜ್ಞಾ ಗಲಗಲಿ ಸೇರಿದಂತೆ ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ