ಪರೀಕ್ಷೆ ಸನಿಹ, ಉಪನ್ಯಾಸಕರ ಕೊರತೆ ನೀಗಿಸಲು ಆಗ್ರಹ

KannadaprabhaNewsNetwork |  
Published : Sep 25, 2025, 01:00 AM IST
ಆನವಟ್ಟಿಯ ಪದವಿ ವಿದ್ಯಾರ್ಥಿಗಳು ಬುಧವಾರ ಅತಿಥಿ ಉಪನ್ಯಾಸಕರನ್ನು ನೇಮಿಸಿ ಎಂದು  ಒತ್ತಾಯಿಸಿ ಪ್ರತಿಭಟನೆ ನಡೆಸಿದರಲ್ಲದೆ,  ಉಪ ತಹಶೀಲ್ದಾರ್ ಶಿವಪ್ರಸಾದ್ ಅವರ ಮೂಲಕ ಸರ್ಕಾರಕ್ಕೆ  ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಇಲ್ಲಿಯ ಪ್ರಥಮ ದರ್ಜೆ ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದಿದೆ. ನವೆಂಬರ್ ಮೊದಲ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತವೆ. ಪರೀಕ್ಷೆ ಸಮೀಪಿಸುತ್ತಿದ್ದರೂ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರನ್ನೂ ನೇಮಿಸಿಲ್ಲ. ಕೂಡಲೇ ಉಪನ್ಯಾಸಕರನ್ನು ನೇಮಿಸಿ ಎಂದು ಬುಧವಾರ ಆನವಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಆನವಟ್ಟಿ

ಇಲ್ಲಿಯ ಪ್ರಥಮ ದರ್ಜೆ ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದಿದೆ. ನವೆಂಬರ್ ಮೊದಲ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತವೆ. ಪರೀಕ್ಷೆ ಸಮೀಪಿಸುತ್ತಿದ್ದರೂ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರನ್ನೂ ನೇಮಿಸಿಲ್ಲ. ಕೂಡಲೇ ಉಪನ್ಯಾಸಕರನ್ನು ನೇಮಿಸಿ ಎಂದು ಬುಧವಾರ ಆನವಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಾಲೇಜಿನಲ್ಲಿ 260ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳು ಇದ್ದು, 29 ಉಪನ್ಯಾಸಕರು ಬೇಕಾಗಿದ್ದು, ಖಾಯಂ ಇರುವ 8 ಉಪನ್ಯಾಸಕರು ಮಾತ್ರ ಪಾಠ-ಪ್ರಚವನ ಮಾಡುತ್ತಿದ್ದಾರೆ. ಇನ್ನೂ ಉಳಿದ 21 ಉಪನ್ಯಾಸಕ ಹುದ್ದೆಗಳನ್ನು ಅತಿಥಿ ಉಪನ್ಯಾಸಕರು ನಿರ್ವಹಿಸುತ್ತಿದ್ದಾರೆ. ಸದ್ಯ ಯುಜಿಸಿಯ ಕೆಲವು ಗೊಂದಲಗಳಿಂದ ಅತಿಥಿಗಳ ನೇಮಕಾತಿ ಆಗುತ್ತಿಲ್ಲ ಎಂದು ದೂರಿದರು.

ಯುಜಿಸಿ ನಿಯಮಾವಳಿಯನ್ನು ಮುಂದಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನೊಂದೆಡೆ ಉಪನ್ಯಾಸಕರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ತಕ್ಷಣ ಕಾಲೇಜು ಶಿಕ್ಷಣ ಇಲಾಖೆ ಎದುರಾಗಿರುವ ಗೊಂದಲ ಪರಿಹರಿಸಬೇಕು ಅಥವಾ ಪರ್ಯಾಯ ಮಾರ್ಗ ಹುಡುಕಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳಾದ ಪಿ. ಹೇಮಂತ್, ಎಂ. ಮನು, ಎಸ್.ಪೃಥ್ವಿ, ಕೆ. ಆಕಾಶ್, ಕಾರ್ತೀಕ್, ಆರ್.ಎಚ್. ಲಿಂಗರಾಜ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಲೇಜು ಅಭಿವೃಧಿ ಸಮಿತಿ ಉಪಾಧ್ಯಕ್ಷ ಮಧುಕೇಶ್ವರ್ ಪಾಟೀಲ್ ಅವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಸ್ಥಳಕ್ಕೆ ಉಪ ತಹಸೀಲ್ದಾರ್ ಶಿವಪ್ರಸಾದ್ ಅವರನ್ನು ಕರೆಸಿ ಸಮಸ್ಯೆಯ ವಿವರ ನೀಡಿದರು.

ಉಪ ತಹಸೀಲ್ದಾರ್ ಶಿವಪ್ರಸಾದ್ ಅವರು ಪದವಿ ವಿದ್ಯಾರ್ಥಿಗಳಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಪದವಿ ವಿದ್ಯಾರ್ಥಿಗಳ ಸಮಸ್ಯೆಯನ್ನು ತಹಸೀಲ್ದಾರ್ ಅವರ ಗಮನಕ್ಕೆ ತರುತ್ತೇನೆ ಮತ್ತು ನಿಮ್ಮ ಉಪನ್ಯಾಸಕರ ಬೇಡಿಕೆ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ತಲುಪಿಸುತ್ತೇನೆ ಎಂದರು.

PREV

Recommended Stories

ಉಡುಪಿ-ಉಚ್ಚಿಲ ದಸರಾ: ನಿತ್ಯ ಸಾವಿರಾರು ಮಹಿಳೆಯರಿಂದ ಕುಂಕುಮಾರ್ಚನೆ
ಡಾ.ಬಿ.ಆರ್‌.ಅಂಬೇಡ್ಕರ್‌ ಸಭಾಭವನ ಉದ್ಘಾಟನೆ