ಪರೀಕ್ಷೆಗಳು ವಿಜಯದ ಮೆಟ್ಟಿಲುಗಳಿದ್ದಂತೆ

KannadaprabhaNewsNetwork |  
Published : Jan 09, 2024, 02:00 AM IST
ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಜಯಶ್ರೀ ವರೂರ ಉದ್ಘಾಟಿಸಿದರು. | Kannada Prabha

ಸಾರಾಂಶ

ನೂಲ್ವಿ ಗ್ರಾಮದಲ್ಲಿರುವ ಜ. ರೇಣುಕಾಚಾರ್ಯ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢ ಶಾಲೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪದಿಂದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ಸಿದ್ಧತೆ ಹೇಗೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪರೀಕ್ಷಾ ಪೂರ್ವ ಸಿದ್ಧತೆ ಹೇಗೆ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ಜಯಶ್ರೀ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ವಿದ್ಯಾರ್ಥಿಗಳ ಸಾಮರ್ಥ್ಯ ಅಳೆಯುವ ವಿಧಾನ ಪರೀಕ್ಷೆಗಳು. ಈ ಪರೀಕ್ಷೆಗಳು ವಿಜಯದ ಮೆಟ್ಟಿಲುಗಳಿದ್ದಂತೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಜಯಶ್ರೀ ವರೂರ ಹೇಳಿದರು.

ತಾಲೂಕಿನ ನೂಲ್ವಿ ಗ್ರಾಮದಲ್ಲಿರುವ ಜ. ರೇಣುಕಾಚಾರ್ಯ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢ ಶಾಲೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪದಿಂದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಪರೀಕ್ಷಾ ಪೂರ್ವ ಸಿದ್ಧತೆ ಹೇಗೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಧ್ಯಯನಕ್ಕೆ ಕ್ರಮಬದ್ಧತೆ ಅಗತ್ಯ. ಸರಿಯಾಗಿ ಅರ್ಥಮಾಡಿಕೊಂಡು ಓದಿದರೆ ವಿದ್ಯಾರ್ಥಿಗಳಿಗೆ ಏಕಾಗ್ರತೆ ತನ್ನಿಂದ ತಾನೆ ಬರುತ್ತದೆ. ಅಧ್ಯಯನ ಮಾಡುವಾಗ ನಕಾರಾತ್ಮಕ ಭಾವನೆ ಇರಬಾರದು. ಶ್ರದ್ಧೆಯಿಂದ ಓದಿರಿ. ನಿಮ್ಮಲ್ಲಿರುವ ಶಕ್ತಿಯ ಬಗ್ಗೆ ನಂಬಿಕೆ ಇರಲಿ. ಈ ಶ್ರದ್ಧೆಯಿಂದ ವಿದ್ಯಾರ್ಥಿಗಳು ಎಂತಹ ಮಹತ್ಕಾರ್ಯವನ್ನಾದರೂ ಸಾಧಿಸಬಹುದು. ಪರೀಕ್ಷಾ ಪರಿಣಾಮ ಸುಧಾರಣೆಗಾಗಿ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪದ ಕಾರ್ಯ ಅಭಿನಂದನೀಯ ಎಂದರು.

ಹುಬ್ಬಳ್ಳಿ ಗ್ರಾಮೀಣಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಒಳ್ಳೆಯ ತಿರುವು. ಅದು ನಿಮ್ಮ ಮುಂದಿನ ವಿದ್ಯಾಭ್ಯಾಸ ದಿನಗಳನ್ನು ನಿರ್ಧರಿಸುತ್ತದೆ. ಗ್ರಹ ವೇಳಾಪಟ್ಟಿ ಹಾಕಿಕೊಂಡು ಸಮಯದ ಸದ್ಬಳಕೆ ಮಾಡಿಕೊಂಡು ಓದಬೇಕು. ಗುಂಪು ಚರ್ಚೆ, ಪುನರಾವರ್ತನೆ ಮೂಲಕ ಅಧ್ಯಯನ ಮಾಡಿದರೆ ನಿಮ್ಮಲ್ಲಿ ನೆನಪಿನ ಶಕ್ತಿ ವೃದ್ಧಿಸುವುದು. ತಂದೆ, ತಾಯಿ, ಇಲಾಖೆ ಹಾಗೂ ಶಿಕ್ಷಕರು ನಿಮಗಾಗಿ ವ್ಯಯಿಸುತ್ತಿರುವ ಶ್ರಮ ಅರ್ಥಮಾಡಿಕೊಂಡು ಓದಬೇಕು ಎಂದರು.

ಧಾರವಾಡ ಡಿಮ್ಹಾನ್ಸ್ ಮನೋವೈದ್ಯಕೀಯ ಸಮಾಜ ಕಾರ್ಯಕರ್ತ ಪ್ರಶಾಂತ ಪಾಟೀಲ ಓದು, ಬರಹ, ಏಕಾಗ್ರತೆ, ಶ್ರದ್ಧೆ, ಆತ್ಮವಿಶ್ವಾಸ ಕಂಠಪಾಠ ಪ್ರವೃತ್ತಿ ಮುಂತಾದ ವಿಷಯಗಳ ಕುರಿತು ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ಪ್ರಭು ತಳವಾರ ಹಾಗೂ ಜಾನಪದ ವಿದ್ವಾಂಸ ಡಾ. ರಾಮು ಮೂಲಗಿ ಮಾತನಾಡಿದರು. ಗುರು ಬಾಗಲ್ ಸ್ವಾಗತಿಸಿದರು. ಸಂಚಾಲಕ ವೀರಣ್ಣ ವಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ.ಎನ್. ಬಡ್ಡಿ ನಿರೂಪಿಸಿದರು. ಸಂಜನಾ ಮಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ