ಎಕ್ಸಲೆಂಟ್ ಯುವರಾಜ್ ಜೈನ್‌ಗೆ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ

KannadaprabhaNewsNetwork |  
Published : Nov 06, 2025, 03:00 AM IST
ಎಕ್ಸಲೆಂಟ್ ಯುವರಾಜ್ ಜೈನ್ ಅವರಿಗೆ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ  | Kannada Prabha

ಸಾರಾಂಶ

ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು ಮೂಡುಬಿದರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅವರಿಗೆ ಶನಿವಾರ ಸಂಪಾಜೆ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರದಾನಿಸಲಾಯಿತು.

ಮೂಡುಬಿದಿರೆ: ಸಂಪಾಜೆಯ ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ವತಿಯಿಂದ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು ಮೂಡುಬಿದರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅವರಿಗೆ ಶನಿವಾರ ಸಂಪಾಜೆ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರದಾನಿಸಲಾಯಿತು.

ಅಭಿನಂದನಾ ಮಾತುಗಳನ್ನಾಡಿದ ಯಕ್ಷಗಾನ ವಿದ್ವಾಂಸರಾದ ಡಾ ಪ್ರಭಾಕರ ಜೋಶಿ, ನಾರಾವಿಯಂತಹ ಗ್ರಾಮೀಣ ಪ್ರದೇಶದಲ್ಲಿ ಬೆಳೆದು ಉಜಿರೆ ಧರ್ಮಸ್ಥಳದಲ್ಲಿ ಸಂಸ್ಕಾರ ಭರಿತರಾಗಿ ಎಕ್ಸಲೆಂಟ್ ಎಂಬ ವಿದ್ಯಾಸಂಸ್ಥೆಯನ್ನು ಕಟ್ಟಿ ಭಾಷೆ, ಕಲೆ, ಶಿಕ್ಷಣ, ಸಂಸ್ಕೃತಿ, ಸಂಸ್ಕಾರಗಳ ಸಮರಸ ಸಂಗಮವಾಗಿ ಆ ವಿದ್ಯಾಸಂಸ್ಥೆಯನ್ನು ಬೆಳೆಸಿದ ಯುವರಾಜ ಜೈ ನ್ ಆದರ್ಶ ಶಿಕ್ಷಣ ವ್ಯವಸ್ಥೆಗೆ ಎಕ್ಸಲೆಂಟ್ ಸಂಸ್ಥೆಯನ್ನು ಮಾದರಿಯಾಗಿಸಿದವರು ಎಂದರು. ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಯುವರಾಜ ಜೈನ್ ಶಿಕ್ಷಣದೊಂದಿಗೆ ಬದ್ಧತೆ ಪ್ರಾಮಾಣಿಕತೆ ಸಂಸ್ಕಾರ ಮೇಳವಿಸಿದಾಗ ಮಾತ್ರವೇ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದರು.

ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ.ಪ್ರದೀಪ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಡ್ವಕೇಟ್ ಜನರಲ್ ಉದಯ ಹೊಳ್ಳ, ಕರ್ನಾಟಕ ಉಚ್ಚ ನ್ಯಾಯಾಲಯ ನ್ಯಾಯವಾದಿ ಸಿರಿಲ್ ಪ್ರಸಾದ್ , ಆಗಮ ಶಾಸ್ತ್ರಜ್ಞ ಭಾಸ್ಕರ ಭಟ್, ವೇದಮೂರ್ತಿ ಕುಡುಪು ನರಸಿಂಹ ತಂತ್ರಿ, ಖ್ಯಾತ ಪಿಟೀಲು ವಾದಕ ವಿಠಲ ರಾಮಮೂರ್ತಿ , ಖ್ಯಾತ ಜಾದೂಗಾರ ಪ್ರೊಫೆಸರ್ ಶಂಕರ್, ಕುರಿಯ ವಿಠಲ ಶಾಸ್ತ್ರಿ ಪ್ರತಿಷ್ಠಾನದ ಉಜಿರೆ ಅಶೋಕ ಭಟ್ ಮತ್ತಿತರರಿದ್ದರು.ಹಿರಣ್ಯ ವೆಂಕಟೇಶ್ವರ ಭಟ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ