ಕನ್ನಡಪ್ರಭ ವಾರ್ತೆ ಮೈಸೂರು
ಈ ಒಡಂಬಡಿಕೆಯ ಭಾಗವಾಗಿ ಮೈಸೂರಿನ ಎರಡೂ ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಅಧಿಕಾರಿಗಳು, ಎರಡೂ ಇಲಾಖೆಗಳಿಗೆ ಸಂಬಂಧಪಟ್ಟ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಜ್ಞಾನ ಪಡೆಯುವುದ ಅಲ್ಲದೇ, ಸದರಿ ವಿಷಯಗಳಲ್ಲಾಗುವ ಸಂಶೋಧನೆ ಮತ್ತು ಅಭಿವೃದ್ಧಿ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಜ್ಞಾನ ಪಡೆದು, ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಅಳವಡಿಸಿಕೊಳ್ಳಬಹುದಾಗಿದೆ.
ಅಂಚೆ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸೈಬರ್ ಭದ್ರತೆ, ಬೆರಳಚ್ಚು ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ವಿಷಯಗಳ ಬಗ್ಗೆ ತಿಳಿದುಕೊಂಡರೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂಚೆ ಇಲಾಖೆಗೆ ಸಂಬಂದಿಸಿದ ಸಣ್ಣ ಹೂಡಿಕೆ ಅವಕಾಶಗಳು, ಹಣಕಾಸು ನಿರ್ವಹಣೆ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ವಿಷಯಗಳ ಮೇಲೆ ಪರಿಣಿತಿ ಹೊಂದಬಹುದಾಗಿದೆ.ಈ ಒಡಂಬಡಿಕೆ ಸಹಿ ಹಾಕಿದ ಅಂಚೆ ತರಬೇತಿ ಸಂಸ್ಥೆಯ ನಿರ್ದೇಶಕ ಡಾ. ಆಶಿಶ್ ಸಿಂಗ್ ಠಾಕೂರ್ ಮಾತನಾಡಿ, ಇದೊಂದು ಹೆಮ್ಮೆಯ ಕ್ಷಣವಾಗಿದ್ದು, ಎರಡೂ ಸಂಸ್ಥೆಗಳ ಅಧಿಕಾರಿಗಳಿಗೆ ಜ್ಞಾನ ಮತ್ತು ಅನುಭವದ ವಿನಿಮಯವಾಗಿ, ಅವರ ಕಾರ್ಯ ಕ್ಷೇತ್ರದಲ್ಲಿ ಮೌಲ್ಯವರ್ಧನೆಯಾಗಲಿದೆ ಎಂದು ತಿಳಿಸಿದರು.
ಕೆಪಿಎ ಸಹಾಯಕ ನಿರ್ದೇಶಕರಾದ ಎಚ್.ಎಸ್. ರೇಣುಕಾರಾಧ್ಯ, ಎನ್. ಸುದರ್ಶನ, ಎಸ್. ವೆಂಕಟೇಶ್, ಎಂ. ಕ್ರಾಂತಿರಾಜ್ ಒಡೆಯರ್, ಅಂಚೆ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಬಾಲರಾಜ್, ಶ್ರೀಧರ್, ಶ್ರದ್ಧಾ ವಿ. ಗೋಕರ್ಣ, ಕೆ. ಮಂಜುನಾಥ ರಾವ್ ಮೊದಲಾದವರು ಇದ್ದರು.