ಕನ್ನಡಪ್ರಭ ವಾರ್ತೆ ರಾಯಚೂರು
ತಾಲೂಕಿನ ಬಿಚ್ಚಾಲಿ ಗ್ರಾಪಂ ಬಿ.ಯದ್ಲಾಪೂರು ನಾಲಾ ಹೊಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಕೂಲಿಕಾರರಿಗೆ, ತಾಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾನದ ಮಹತ್ವದ ಕುರಿತು ಮತದಾರರ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. 18 ವರ್ಷ ತುಂಬಿದ ಎಲ್ಲಾ ವಯಸ್ಕ ಪ್ರೌಢ ಪ್ರಜೆಗಳಿಗೆ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಇಂತಹ ಅತ್ಯುತ್ತಮ ವ್ಯವಸ್ಥೆಯಲ್ಲಿ ಭಾರತೀಯ ಪ್ರಜೆಗಳಾದ ನಾವು ಪ್ರಬುದ್ಧತೆಯಿಂದ ಅಮೂಲ್ಯ ಮತ ಚಲಾಯಿಸಿ, ವಾಗ್ಧಾನ ಯಶಸ್ವಿಯಾಗಿಸೋಣ ಎಂದರು. ಈ ವೇಳೆ ಪಿಡಿಒ ಮಾಳಮ್ಮ ಶಿವಂಗಿ, ಐಇಸಿ ಸಂಯೋಜಕ ಧನರಾಜ, ತಾಂತ್ರಿಕ ಸಹಾಯಕ ಇಂಜೀನಿಯರ್ ಗುಡದಪ್ಪ, ಸಿ.ಅರ್.ಪಿ ಶ್ರೀಧರ, ಕಾರ್ಯದರ್ಶಿ ನರಸಿಂಹ, ಗ್ರಾ.ಪಂ ಡಿಇಒ ಕೃಷ್ಣ, ಬಿ.ಎಪ್.ಟಿ ಇಮಾನವೇಲ್, ಜಿಕೆಎಮ್ ಮೀನಾಕ್ಷಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ನರೇಗಾ ಮೇಟ್ ಕೂಲಿಕಾರರು ಉಪಸ್ಥಿತರಿದ್ದರು.