ಬರ ಪರಿಸ್ಥಿತಿಯಲ್ಲಿ ನೀರು, ವಿದ್ಯುತ್‌ ಬಳಕೆಯ ಹಿಡಿತ ಇರಲಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

KannadaprabhaNewsNetwork |  
Published : Jul 20, 2026, 01:00 AM IST
ಸ್ನೇಹಲ್‌ ಆರ್‌., ಜಿಲ್ಲಾಧಿಕಾರಿಗಳು | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮಳೆಯಿಂದ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದ್ದಾರೆ.

ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮಳೆಯಿಂದ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 1 ನೇ ಜೂನ್‌ನಿಂದ 17ನೇ ಜುಲೈವರೆಗೆ ವಾಡಿಕೆ ಮಳೆ 209 ಮೀ.ಮೀ ಆಗಬೇಕಾಗಿದ್ದು ವಾಸ್ತವಿಕ 142.3 ಮೀ.ಮೀ ಮಳೆಯಾಗಿದ್ದು ಶೇ. 32ರಷ್ಟು ಮಳೆ ಪ್ರಮಾಣ ಕೊರತೆಯಾಗಿದೆ. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನೀರು ಮತ್ತು ವಿದ್ಯುತ್‌ ಅನ್ನು ಜವಾಬ್ದಾರಿ ಮತ್ತು ಮಿತವಾಗಿ ಬಳಸುವುದು ನಮ್ಮೆಲ್ಲರ ಕರ್ತವ್ಯ. ಮನೆಯ ನಲ್ಲಿಗಳು, ಪೈಪ್‌ಗಳು ಮತ್ತು ಫ್ಲಶ್ ಟ್ಯಾಂಕ್ ಗಳಲ್ಲಿ ನೀರು ಸೋರಿಕೆಯಾಗುತ್ತಿದ್ದರೆ ತಕ್ಷಣವೇ ದುರಸ್ತಿ ಮಾಡಿಸುವುದು, ತರಕಾರಿ ತೊಳೆದ ಮತ್ತು ಅಕ್ಕಿ ತೊಳೆದ ನೀರನ್ನು ಚೆಲ್ಲುವ ಬದಲು ಗಿಡಗಳಿಗೆ ಹಾಕುವುದು, ವಾಹನಗಳನ್ನು ತೊಳೆಯಲು ಮತ್ತು ಮನೆ ಅಂಗಳ ತೊಳೆಯಲು ಪೈಪ್ ಬಳಸಬೇಡಿ, ಬಕೆಟ್ ನೀರನ್ನು ಮಾತ್ರ ಬಳಸಿ. ಹಲ್ಲುಜ್ಜುವಾಗ, ಮುಖ ತೊಳೆಯುವಾಗ ಅಥವಾ ಪಾತ್ರೆ ತೊಳೆಯುವಾಗ ನಲ್ಲಿಯನ್ನು ಸತತವಾಗಿ ಶುರು ಮಾಡಿಡಬೇಡಿ. ಸ್ನಾನಕ್ಕೆ ಶವರ್ ಬದಲಾಗಿ ಬಕೆಟ್ ನೀರನ್ನು ಬಳಸುವುದರಿಂದ ಅಪಾರ ಪ್ರಮಾಣದ ನೀರು ಉಳಿತಾಯವಾಗುತ್ತದೆ. ವಾಷಿಂಗ್ ಮಷೀನ್ ಬಳಸುವಾಗ ಬಟ್ಟೆಗಳು ಪೂರ್ಣ ಪ್ರಮಾಣದಲ್ಲಿದ್ದಾಗ ಮಾತ್ರ ಚಾಲನೆ ಮಾಡಿ ಎಂದು ಸೂಚನೆ ನೀಡಿದರು.

ಯಾವುದೇ ಕೋಣೆಯಿಂದ ಹೊರಡುವಾಗ ಲೈಟ್, ಫ್ಯಾನ್ ಮತ್ತು ಎಸಿಗಳನ್ನು ಕಡ್ಡಾಯವಾಗಿ ಬಂದ್‌ ಮಾಡಿ. ಹಗಲಿನಲ್ಲಿ ಮನೆಯ ಕಿಟಕಿಗಳನ್ನು ತೆರೆದಿಟ್ಟು ಸ್ವಾಭಾವಿಕ ಬೆಳಕು ಮತ್ತು ಗಾಳಿಯನ್ನು ಹೆಚ್ಚಾಗಿ ಬಳಸಿ. ಟಿವಿ, ಕಂಪ್ಯೂಟರ್ ಮತ್ತು ಮೊಬೈಲ್ ಚಾರ್ಜರ್‌ಗಳನ್ನು ಬಳಸದಿದ್ದಾಗ ಸ್ವಿಚ್ ಆಫ್ ಮಾಡುವುದಲ್ಲದೆ ಪ್ಲಗ್‌ನಿಂದ ಹೊರತೆಗೆಯಿರಿ. ಬರಗಾಲದ ಕಠಿಣ ಸಮಯದಲ್ಲಿ ಪ್ರತಿಯೊಬ್ಬ ನಾಗರಿಕರ ಸಣ್ಣ ಉಳಿತಾಯವೂ ಕೂಡ ಸಮಾಜಕ್ಕೆ ದೊಡ್ಡ ಕೊಡುಗೆಯಾಗುತ್ತದೆ. ಪ್ರತಿ ಹನಿ ನೀರು ಮತ್ತು ಪ್ರತಿ ಯೂನಿಟ್ ವಿದ್ಯುತ್ ಅಮೂಲ್ಯ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ ಮಾಡಿದ್ದಾರೆ.

ಮಂತ್ರಿ ಫಸಲ್ ಬಿಮಾ ಯೋಜನೆ ನೋಂದಣಿಗೆ ಸಲಹೆ

ಬೆಳೆ ವಿಮೆ- ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಜಿಲ್ಲೆಯಲ್ಲಿ ಈಗಾಗಲೇ ಕೃಷಿ ಇಲಾಖೆಯು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಅದರಂತೆ, ಜಿಲ್ಲೆಯ ರೈತರು ಪ್ರಕೃತಿ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟ ಪರಿಹಾರ ಪಡೆಯಲು ನಿಗದಿತ ಕೊನೆಯ ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಮುಂಗಾರು ಬೆಳೆಗಳಿಗೆ ವಿಮಾ ಮೊತ್ತದ ಕೇವಲ ಶೇ.2 ರಷ್ಟು ಮಾತ್ರ ರೈತರು ಪ್ರೀಮಿಯಂ ಪಾವತಿಸಬೇಕು. ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತ ಬಂಡಾಯಕ್ಕೀಗ 46 ವರ್ಷ!
ಪಾಲಕರು ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಲಿ: ಶ್ರೀಕೃಷ್ಣ ಹೆಗಡೆ