814 ಹುದ್ದೆ ಭರ್ತಿಗೆ ಸರ್ಕಾರದ ಮೇಲೆ ಒತ್ತಡ ತನ್ನಿ

KannadaprabhaNewsNetwork |  
Published : Aug 06, 2026, 02:00 AM IST
ಸಾರಿಗೆ ಸಂಸ್ಥೆಯಲ್ಲಿ 814 ಹುದ್ದೆಗಳನ್ನೂ ಭರ್ತಿ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತೆ ಉದ್ಯೋಗಾಕಾಂಕ್ಷಿಗಳು ವಿಪ ಮುಖ್ಯ ಸಚೇತಕ ಎನ್‌. ರವಿಕುಮಾರ್‌ಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

814 ಹುದ್ದೆಗಳಿಗೂ ಕೂಡಲೇ ನೇಮಕಾತಿ ಆದೇಶ ಹೊರಡಿಸಲು ಪ್ರತಿಪಕ್ಷದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವಂತೆ ಉದ್ಯೋಗಾಕಾಂಕ್ಷಿಗಳು ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ವಿಪ ಮುಖ್ಯ ಸಚೇತಕ ಎನ್‌. ರವಿಕುಮಾರ್‌ಗೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿ:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 2019ರ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರಕಟಿಸಲಾಗಿದ್ದ ಒಟ್ಟು 2,814 ಚಾಲಕ ಹಾಗೂ ಚಾಲಕ-ಕಂ- ನಿರ್ವಾಹಕ ಹುದ್ದೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತೆ ಉದ್ಯೋಗಾಕಾಂಕ್ಷಿಗಳು ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ವಿಪ ಮುಖ್ಯ ಸಚೇತಕ ಎನ್‌. ರವಿಕುಮಾರ್‌ಗೆ ಮನವಿ ಸಲ್ಲಿಸಿದರು.

ದಾಖಲೆ ಪರಿಶೀಲನೆ ಹಾಗೂ ವೃತ್ತಿ ಪರೀಕ್ಷೆ ಪೂರ್ಣಗೊಂಡು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಆದರೆ, ಕೇವಲ 2,000 ಹುದ್ದೆ ನೇಮಕಾತಿಗೆ ಮಾತ್ರ ಆದೇಶ ಹೊರಡಿಸಲಾಗಿದ್ದು, ಉಳಿದ 814 ಹುದ್ದೆ ಭರ್ತಿ ಮಾಡದಿರುವುದು ಅನ್ಯಾಯವಾಗಿದೆ. ಈ ನಿರ್ಧಾರದಿಂದ ವಯೋಮಿತಿ ಮೀರಿರುವ ಅಭ್ಯರ್ಥಿಗಳು ಹಾಗೂ ಆಯ್ಕೆ ಪಟ್ಟಿಯಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದ ಅನೇಕ ಉದ್ಯೋಗಾಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ. ಆದ್ದರಿಂದ ಉಳಿದ 814 ಹುದ್ದೆಗಳಿಗೂ ಕೂಡಲೇ ನೇಮಕಾತಿ ಆದೇಶ ಹೊರಡಿಸಲು ಪ್ರತಿಪಕ್ಷದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ರವಿಕುಮಾರ, ಸಂಬಂಧಿಸಿದ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈ ವೇಳೆ ರಫೀಕ, ಶಿವು, ಬಸವರಾಜ, ಸುರೇಶ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮೀಕ್ಷೆ ನಂತರ ಬೆಳೆಹಾನಿ ಪರಿಹಾರ ಮೊತ್ತ ನಿರ್ಧಾರ: ಸಚಿವ ಲಾಡ್‌
ಬರ ನಿರ್ವಹಣೆಗೆ ಸಿದ್ಧರಾಗಿ: ಸಚಿವ ಸಂತೋಷ ಲಾಡ್‌