ಪುಂಡಾಟ ಮೆರೆದ ಭಾಷಾಂಧರ ಗಡಿಪಾರು ಮಾಡಿ

KannadaprabhaNewsNetwork |  
Published : Mar 02, 2025, 01:16 AM IST
ಎಂಇಎಸ್‌-ಶಿವಸೇನೆ ಪುಂಡಾಟಿಕೆ ವಿರೋಧಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸಬೇಕು. ರಾಜ್ಯದಲ್ಲಿ ಕನ್ನಡ ಮಾತನಾಡಿದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆಸುವ ಮೂಲಕ ಪುಂಡಾಟ ಮೆರೆದ ಮರಾಠಿ ಭಾಷಾಂಧರನ್ನು ಗಡಿಪಾರು ಮಾಡಬೇಕು ಎಂದು ಕನ್ನಡ ಜಾಗೃತಿ ವೇದಿಕೆ ಜಿಲ್ಲಾ ಹಾಗೂ ತಾಲೂಕು ಘಟಕಗಳು ಹಕ್ಕೊತ್ತಾಯ ಮಂಡಿಸಿವೆ.

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸಬೇಕು. ರಾಜ್ಯದಲ್ಲಿ ಕನ್ನಡ ಮಾತನಾಡಿದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆಸುವ ಮೂಲಕ ಪುಂಡಾಟ ಮೆರೆದ ಮರಾಠಿ ಭಾಷಾಂಧರನ್ನು ಗಡಿಪಾರು ಮಾಡಬೇಕು ಎಂದು ಕನ್ನಡ ಜಾಗೃತಿ ವೇದಿಕೆ ಜಿಲ್ಲಾ ಹಾಗೂ ತಾಲೂಕು ಘಟಕಗಳು ಹಕ್ಕೊತ್ತಾಯ ಮಂಡಿಸಿವೆ.

ಇಲ್ಲಿನ ತಾಲೂಕು ಕಚೇರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕನ್ನಡಪರ ಕಾರ್ಯಕರ್ತರು, ಎಂಇಎಸ್‌-ಶಿವಸೇನೆ ಭೂತದಹನ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಕನ್ನಡ ಜಾಗೃತಿ ವೇದಿಕೆ ಮುಖಂಡ ಅಗ್ನಿ ವೆಂಕಟೇಶ್ ಮಾತನಾಡಿ, ಮರಾಠಿ ಪುಂಡರು ಕರ್ನಾಟಕದ ಅನ್ನ.ನೀರು, ಉದ್ಯೋಗ ಪಡೆದು ಇಲ್ಲೇ ಈ ನೆಲದ ಬಗ್ಗೆ ಅವಹೇಳನ ಮಾಡುವ ಉದ್ದಟತನ ಪ್ರದರ್ಶಿಸುವುದು ಖಂಡನೀಯ. ಕನ್ನಡ ನಾಡಿನಲ್ಲಿ ಬದುಕುವ ಪ್ರತಿಯೊಬ್ಬರು ಕನ್ನಡ ಕಲಿತು ವ್ಯವಹರಿಸುವುದು ಅಗತ್ಯ ಎಂದರು.

ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎಂ. ನಾಗರಾಜ್ ಮಾತನಾಡಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಮಹಾಜನ್ ವರದಿ ಈ ವಿಚಾರದಲ್ಲಿ ಅಂತಿಮ. ಆದರೆ ಪದೇ ಪದೇ ಗಡಿ ವಿವಾದ ಕೆದಕುತ್ತಾ, ಕನ್ನಡ-ಮರಾಠಿ ಭಾಷಿಕರ ನಡುವೆ ಭಾಷಾ ದ್ವೇಷ ಪ್ರಚೋದಿಸುವ ಕೆಲಸವನ್ನು ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಕನ್ನಡ ನೆಲದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ಪ್ರಯತ್ನ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಅಮಾಯಕ ಕನ್ನಡಿಗರ ಮೇಲೆ ಹಲ್ಲೆ ಮಾಡುವುದು, ಮಸಿ ಬಳಿಯುವುದು ಇತ್ಯಾದಿ ಅಯೋಗ್ಯತನವನ್ನು ಕೆಲ ಕಿಡಿಗೇಡಿಗಳು ನಡೆಸುತ್ತಿದ್ದು, ಅವರ ವಿರುದ್ದ ಅಲ್ಲಿನ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತಪ್ಪಿದಲ್ಲಿ ಪರಿಸ್ಥಿತಿ ಕೈಮೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಲೂಕು ಅಧ್ಯಕ್ಷ ಶಶಿಧರ್‌, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಓಬದೇನಹಳ್ಳಿ ಕೆ. ಮುನಿಯಪ್ಪ, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಮಹಿಳಾ ಘಟಕ ಅಧ್ಯಕ್ಷೆ ಮುನಿರತ್ನಮ್ಮ, ಲಕ್ಷ್ಮಿ, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಸುರೇಶ್, ಸಂಘಟನಾ ಕಾರ್ಯದರ್ಶಿ ರಜತ್, ಶಿವಕುಮಾರ್ ಸ್ವಾಮಿ, ತಾಲೂಕು ಸಂಚಾಲಕ ಮಾದೇವ್, ಶಿವಪ್ರಸಾದ್, ವಿಶ್ವನಾಥ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡರು.

ಫೋಟೋ- 1ಕೆಡಿಬಿಪಿ3-

ಎಂಇಎಸ್‌-ಶಿವಸೇನೆ ಪುಂಡಾಟಿಕೆ ವಿರೋಧಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!