ಕಲಬುರಗಿ: 12ನೇ ಶತಮಾನದಲ್ಲಿ ಬಸವಾದಿ ಶರಣರ ನೇತೃತ್ವದಲ್ಲಿ ಸ್ಥಾಪಿಸಲಾಗಿರುವ ಅನುಭವ ಮಂಟಪ ಜಗತ್ತಿನ ಮೊಟ್ಟ ಮೊದಲ ಸೌಹಾರ್ದ ಕೇಂದ್ರವಾಗಿತ್ತೆಂದು ಸಾಹಿತಿ- ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.
ವಚನ ಸಾಹಿತ್ಯ ಮತ್ತು ಜಾತಿ ವಿನಾಶ ಕುರಿತು ಅಫಜಲಪುರ ಭಾರತೀಯ ಬಸವ ಬಳಗ ಸಂಚಾಲಕ ಅಮೃತ ಪಾಟೀಲ ಮಾತನಾಡಿ, ಶರಣರಿಗೆ ಸಮಾಜದಲ್ಲಿನ ಮೂಢನಂಬಿಕೆ, ಜಾತಿ ವ್ಯವಸ್ಥೆ ಹೊಡೆದು ಹಾಕಿ ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದರು ಎಂದು ತಿಳಿಸಿದರು. ಶರಣರ ದೃಷ್ಟಿಯಲ್ಲಿ ಭಕ್ತನೊಂದು ಕುಲ, ಭವಿಯೊಂದು ಕುಲ ಎಂದು ಹೇಳುವ ಮೂಲಕ ಜಾತಿ ವಿನಾಶಕ್ಕೆ ಮುನ್ನುಡಿ ಬರೆದರು ಎಂದು ಹೇಳಿದರು. ಡಾ. ಶಿವಶರಣಪ್ಪ ಮೋತಕಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ಡಾ. ಡಿ.ಎನ್. ಪಾಟೀಲ ದಿಕ್ಸೂಚಿ ನುಡಿಗಳನ್ನಾಡಿದರು. ಅನುಪಮಾ ಸುಲೇಕರ್ ವೇದಿಕೆಯಲ್ಲಿದ್ದರು. ರವೀಂದ್ರಕುಮಾರ ಭಂಟನಳ್ಳಿ ನಿರೂಪಿಸಿದರು.