ಕನ್ನಡಪ್ರಭ ವಾರ್ತೆ ಸಾಗರ
ಪಟ್ಟಣದ ಬ್ರಾಸಂ ಸಭಾಂಗಣದಲ್ಲಿ ಅಖಿತ ಹವ್ಯಕ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಸ್ವಯಂ ವಾಣಿಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೆ ಉದ್ಯಮ ಆರಂಭಿಸುವ ಮೊದಲು ಅದರ ಒಳಹೊರಗನ್ನು ಅರಿತು ಹೆಜ್ಜೆ ಇಡಬೇಕು ಎಂದು ಕಿವಿಮಾತು ಹೇಳಿದರು.
ಸುಮಾರು 40-50 ವರ್ಷಗಳ ಹಿಂದೆ ಬ್ರಾಹ್ಮಣ ಸಮುದಾಯ ವಕೀಲ ವೃತ್ತಿಯನ್ನೇ ನಂಬಿಕೊಂಡಿದ್ದರು. ಅಂಥ ಕಾಲದಲ್ಲಿ ಸಾಗರದಲ್ಲಿ ಹೊಸದಾಗಿ ಸಿಮೆಂಟ್ ಉತ್ಪನ್ನದ ಉದ್ಯಮ ಸ್ಥಾಪಿಸಿದ್ದೇ ದೊಡ್ಡ ಸುದ್ದಿಯಾಗಿತ್ತು ಎಂದು ತಾವು ಉದ್ಯಮ ಆರಂಭಿಸಿದ್ದನ್ನು ನೆನಪಿಸಿಕೊಂಡ ಅವರು, ಈಗ ಹವ್ಯಕ ಸಮಾಜದವರು ಹತ್ತಾರು ರೀತಿಯ ಉದ್ದಿಮೆಯಲ್ಲಿ ತೊಡಗಿಕೊಂಡಿದ್ದಾರೆ ಎಂದರು.ಪ್ರಸ್ತುತ ಮಾರುಕಟ್ಟೆಯ ಅಗತ್ಯತೆ ಅರಿತು, ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಗ್ರಾಹಕರ ಅಗತ್ಯತೆ ಪೂರೈಸುವ ಮಟ್ಟದಲ್ಲಿ ಸಮಾಜದ ಉದ್ದಿಮೆದಾರರು ಬೆಳೆದಿರುವುದು ಖುಷಿಯ ಸಂಗತಿ. ಯುವಕರು ಇಂತಹ ಸಮಾವೇಶದಲ್ಲಿ ಪಾಲ್ಗೊಂಡು ಹಿರಿಯ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಾಸಭಾದ ನಿರ್ದೇಶಕ ಕೆ.ಎನ್.ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ವೇಣುವಿಘ್ನೇಶ, ಶಿವಮೊಗ್ಗ ಹವ್ಯಕ ಸಂಘದ ಅಧ್ಯಕ್ಷ ವಿ.ಪಿ.ಪೂರ್ಣನಂದ, ಸುರೇಶ್ ಸಾಗರ, ಸಮಾವೇಶದ ಸಂಚಾಲಕ ಎಚ್.ಎನ್.ಉಮೇಶ್, ಶ್ರೀಧರ್, ಗುರುಪಾದ್ ಮೊದಲಾದವರು ಉಪಸ್ಥಿತರಿದ್ದರು. ಸಮಾವೇಶದಲ್ಲಿ ಸಾಗರ, ಹೊಸನಗರ, ಸೊರಬ ತಾಲೂಕಿನ ನೂರಾರು ಉದ್ಯಮಿಗಳು ಭಾಗವಹಿಸಲಿದ್ದರು.