ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡಾ.ಶಿವರಾಮ ಕಾರಂತರ ನಾಟಕಗಳ ಸ್ವರೂಪ: ಅಧ್ಯಯನ ಶಿಬಿರ ನಡೆಯಿತು. ಖ್ಯಾತ ರಂಗನಿರ್ದೇಶಕ ಡಾ. ಶ್ರೀಪಾದ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಕುಂದಾಪುರ
ಕಂಪನಿ ನಾಟಕಗಳ ಹಿನ್ನೆಲೆಯನ್ನು ಬಳಸಿ ರಂಗಕ್ಕೆ ಹೊಸರೂಪ ಕೊಟ್ಟವರು ಕಾರಂತರು. ನಾಟಕಗಳಲ್ಲಿ ವಿಶಿಷ್ಟ ಪರ್ಯಾಯಗಳ ಸೃಷ್ಟಿಸುತ್ತಾ ವಿಶಿಷ್ಟ ನಾಟಕ ರಚನೆ ಮಾಡಿವರುವರು. ಪ್ರಯೋಗಶೀಲತೆಯ ಪರಂಪರೆಯೇ ಕಾರಂತರ ನಾಟಕಗಳ ವೈಶಿಷ್ಟ್ಯ ಎಂದು ಖ್ಯಾತ ರಂಗನಿರ್ದೇಶಕ ಡಾ. ಶ್ರೀಪಾದ ಭಟ್ ಹೇಳಿದರು.ಅವರು ಶನಿವಾರ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಇಲ್ಲಿನ ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆದ ಡಾ.ಶಿವರಾಮ ಕಾರಂತರ ನಾಟಕಗಳ ಸ್ವರೂಪ: ಅಧ್ಯಯನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಡಾ.ಶಿವರಾಮ ಕಾರಂತರನ್ನು ಕೇಂದ್ರವಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಸಾಹಿತ್ಯ ಪ್ರಕಾರಗಳನ್ನು ಪರಿಚಯಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು, ಓದುವಿಕೆಯ ಹವ್ಯಾಸದಿಂದಾಗಿ ವ್ಯಕ್ತಿತ್ವದಲ್ಲಿ ಪರಿಣಾಮಕಾರಿ ಉತ್ತಮ ಬದಲಾವಣೆಯನ್ನು ತರಲು ಸಾಧ್ಯ ಎಂದರು.ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಚೇತನ್ ಶೆಟ್ಟಿ ಕೋವಾಡಿ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸದಾ ಸಕರಾತ್ಮಕ ಭಾವನೆಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಂಡಾಗ ಜೀವನದಲ್ಲಿ ಯಶಸ್ವಿಗೊಳಿಸಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವಸಂತ ಜಿ., ಕನ್ನಡ ವಿಭಾಗದ ಮುಖ್ಯಸ್ಥ ಡಾ.ಗಂಗಾಧರ್ ಉಪಸ್ಥಿತರಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ಸಚಿನ್ ನಿರೂಪಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಮಹಾಲಿಂಗಪ್ಪ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.