ಸಾಮ್ರಾಜ್ಯ ಶಾಹಿಗಳ ತ್ವರಿತ ಲಾಭಕ್ಕಾಗಿ ದುಡಿಯವ ವರ್ಗದ ಶೋಷಣೆ

KannadaprabhaNewsNetwork |  
Published : Feb 23, 2026, 01:15 AM IST
 | Kannada Prabha

ಸಾರಾಂಶ

ಜಗತ್ತಿನ ಬಂಡವಾಳಶಾಹಿಗಳು ಹಾಗೂ ಸಾಮ್ರಾಜ್ಯಶಾಹಿಗಳ ತ್ವರಿತ ಲಾಭಕ್ಕಾಗಿ ದುಡಿಯುವ ವರ್ಗವನ್ನು ದುರ್ಬಲಗೊಳಿಸುವ ಹಾಗೂ ಪರಿಸರ ನಾಶದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಪರಿಸರವಾದಿ ಮತ್ತು ಪ್ರಗತಿಪರ ಚಿಂತಕ ಸಿ.ಯತಿರಾಜು ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಜಗತ್ತಿನ ಬಂಡವಾಳಶಾಹಿಗಳು ಹಾಗೂ ಸಾಮ್ರಾಜ್ಯಶಾಹಿಗಳ ತ್ವರಿತ ಲಾಭಕ್ಕಾಗಿ ದುಡಿಯುವ ವರ್ಗವನ್ನು ದುರ್ಬಲಗೊಳಿಸುವ ಹಾಗೂ ಪರಿಸರ ನಾಶದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಪರಿಸರವಾದಿ ಮತ್ತು ಪ್ರಗತಿಪರ ಚಿಂತಕ ಸಿ.ಯತಿರಾಜು ಹೇಳಿದರು.

ಅವರು ಜನಚಳವಳಿ ಕೇಂದ್ರದಲ್ಲಿ ಕೆಂಪು ಪುಸ್ತಕ ಆಚರಣೆ ಸಮಿತಿ ಹಾಗೂ ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಸಮಿತಿಯಿಂದ ಕೆಂಪು ಪುಸ್ತಕ ದಿನಾಚರಣೆ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶ್ವದಾದ್ಯಂತ ಎಐ ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಇಂದಿನ ಪೀಳಿಗೆ ಏನು ಕಲಿಯಬೇಕು, ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಗೊಂದಲ ಉಂಟಾಗಿದೆ. ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿದ್ದು, ಇಂದಿನ ನವೀನತೆ ನಾಳೆ ಹಳೆಯದಾಗುತ್ತಿದೆ. ಇದರ ನಡುವೆ ಕೃಷಿ ಚಟುವಟಿಕೆಗಳಲ್ಲಿ ಉಂಟಾಗುತ್ತಿರುವ ಅವ್ಯವಸ್ಥೆ, ಜನಸಾಮಾನ್ಯರ ಆರೋಗ್ಯದ ಮೇಲೆ ಬೀಳುತ್ತಿರುವ ದುಷ್ಪರಿಣಾಮಗಳು, ಇಂಧನ ಹಾಗೂ ವಿದ್ಯುತ್ ಬಳಕೆಯ ಏರಿಕೆ, ವಾಯುಗುಣದ ಹದಗೆಟ್ಟು ಹೋಗುತ್ತಿರುವ ಪರಿಸ್ಥಿತಿ—ದುಡಿಯುವ ವರ್ಗ, ರೈತರು ಮತ್ತು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಸಾಮ್ರಾಜ್ಯಶಾಹಿ ನೀತಿಗಳ ವಿರುದ್ಧ ಸಂಘಟಿತ ಹೋರಾಟವೇ ಮುಖ್ಯ ದಾರಿ ಎಂದು ಕರೆ ನೀಡಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಕೆ. ಸುಬ್ರಮಣ್ಯ ಮಾತನಾಡಿ, 1848ರ ಫೆಬ್ರವರಿ 21ರಂದು ಕಾರ್ಲ್ ಮಾರ್ಕ್ಸ್ ಹಾಗೂ ಫ್ರೆಡರಿಕ್ ಎಂಗೆಲ್ಸ್ ಅವರು ರಚಿಸಿದ ಕಮ್ಯುನಿಸ್ಟ್ ಮ್ಯಾನಿಫೆಸ್ಟೋ ವಿಶ್ವದ ಕ್ರಾಂತಿಕಾರಿ ಚಿಂತನೆಗೆ ದಿಕ್ಕು ತೋರಿದ ಮಹತ್ವದ ಗ್ರಂಥವಾಗಿದೆ. ಇದೇ ದಿನ ವಿಶ್ವ ಮಾತೃಭಾಷಾ ದಿನವೂ ಆಗಿರುವುದು ವಿಶೇಷ ಎಂದು ತಿಳಿಸಿದರು. ಈ ವರ್ಷ ಕೆಂಪು ಪುಸ್ತಕ ದಿನವನ್ನು ಸಾಮ್ರಾಜ್ಯಶಾಹಿ ವಿರೋಧದ ವಿಷಯದ ಸುತ್ತ ಆಚರಿಸಲಾಗುತ್ತಿದೆ. ಇದು ದೃಢ ಸಾಮ್ರಾಜ್ಯಶಾಹಿ ವಿರೋಧಿ ನಾಯಕನಾಗಿದ್ದ ಫಿಡೆಲ್ ಕ್ಯಾಸ್ಟ್ರೋ ಅವರ ಶತಮಾನೋತ್ಸವ ವರ್ಷವೂ ಆಗಿದೆ ಎಂದು ಹೇಳಿದರು.

ಕಾರ್ಮಿಕ ಮುಖಂಡ ಶಿವಲಿಂಗಯ್ಯ ಮಾತನಾಡಿ, ಈ ಪುಸ್ತಕವು ಇಂದಿನ ಸಾಮ್ರಾಜ್ಯಶಾಹಿಯ ಸ್ವರೂಪ ಮತ್ತು ಅದರ ಮುಖ್ಯ ಗುಣಲಕ್ಷಣಗಳನ್ನು ವಿಶ್ಲೇಷಿಸುತ್ತದೆ. ಜಾಗತಿಕ ಮಟ್ಟದಲ್ಲಿ ಸಂಘಟಿತ ಹೋರಾಟದ ಮೂಲಕ ಮಾತ್ರ ಸಾಮ್ರಾಜ್ಯಶಾಹಿ ನೀತಿಗಳನ್ನು ಸೋಲಿಸಲು ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಬ್ಬಯ್ಯ ಮಾತನಾಡಿ, ಸಾಮ್ರಾಜ್ಯಶಾಹಿ ಹಾಗೂ ಕೋಮುವಾದ ಶಕ್ತಿಗಳು ಒಟ್ಟಾಗಿ ದೇಶದ ದುಡಿಯುವ ಜನರ ಸಮಸ್ಯೆಗಳನ್ನು ಗಂಭೀರಗೊಳಿಸುತ್ತಿವೆ. ಬಂಡವಾಳಶಾಹಿಗಳ ಲಾಭಕೋರ ನೀತಿಗಳನ್ನು ಸೋಲಿಸಲು ಜನತೆ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಈ ಪುಸ್ತಕವು ಸಾಮ್ರಾಜ್ಯಶಾಹಿಯ ಮೂರು ಹಂತಗಳು, ಜನಜೀವನದ ಮೇಲೆ ಅದರ ಪರಿಣಾಮಗಳು ಹಾಗೂ ಯು.ಎಸ್. ಸಾಮ್ರಾಜ್ಯಶಾಹಿ ಭಾರತದಷ್ಟೇ ಅಲ್ಲ ಇಡೀ ಜಗತ್ತಿನ ಜನತೆಗೆ ಶತ್ರುವೆಂಬ ವಿಚಾರವನ್ನು ಸ್ಪಷ್ಟಪಡಿಸುತ್ತದೆ. ಸಾಮ್ರಾಜ್ಯಶಾಹಿಗೆ ಮಿಲಿಟರಿ ಹಾಗೂ ಆರ್ಥಿಕ ಶಕ್ತಿ ಇದ್ದರೂ ಅದು ಶಾಶ್ವತ ಅಭಿವೃದ್ಧಿಯ ಮಾರ್ಗವಲ್ಲ. ಜಗತ್ತಿನಲ್ಲಿ ಸಾಮ್ರಾಜ್ಯಶಾಹಿ ವಿರೋಧಿ ಹೋರಾಟಗಳ ದೀರ್ಘ ಪರಂಪರೆಯನ್ನು ಈ ಕೃತಿ ನೆನಪಿಸುತ್ತದೆ. ಜನತೆಗೆ ಸರಳವಾಗಿ ಅರ್ಥವಾಗುವ ಭಾಷೆಯಲ್ಲಿ ಪುಸ್ತಕವನ್ನು ಓದುವಂತೆ ಪ್ರೇರೇಪಿಸುವ ಕಾರ್ಯವೇ ಪ್ರಮುಖ ಉದ್ದೇಶ ಎಂದು ಹೇಳಿದರು. ಷಣ್ಮುಗಪ್ಪ ಸ್ವಾಗತಿಸಿದರು. ಲೋಕೇಶ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಒರಿಜಿನಲ್‌ ಚಾಯ್ಸ್‌ ಬ್ಯಾಡ್‌ ಚಾಯ್ಸ್‌. ಸೆಲ್ಲಿಂಗ್ ವಿಸ್ಕಿ ಈಸ್‌ ರಿಸ್ಕಿ’ : ಜಡ್ಜ್‌
ಉಚಿತ ಆರೋಗ್ಯ 10ನೇ ಗ್ಯಾರಂಟಿ ಯೋಜನೆ- ವಸತಿ 8, ಇ-ಖಾತಾ 9ನೇ ಗ್ಯಾರಂಟಿ ಸ್ಕೀಂ : ಡಿಕೆಶಿ