ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಶ್ರೀರಂಗ ವೇದಿಕೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಮಹಿಳಾ ದಸರಾದಲ್ಲಿ ಮಾತನಾಡಿದರು.
ಮಹಿಳೆಯರ ಮೇಲೆ ನಿರಂತರ ಶೋಷಣೆ ನಡೆಯುತ್ತಿವೆ. ಹೆಣ್ಣು ಮಕ್ಕಳು ಗರ್ಭದಲ್ಲಿದ್ದಾಗಲೇ ಶೋಷಣೆ ಆರಂಭವಾಗಿ ಭ್ರೂಣ ಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ದೇವದಾಸಿ ಪದ್ಧತಿ, ಸತಿ ಸಹಗಮನ ಪದ್ಧತಿ ಈಗೆ ಒಂದಲ್ಲಾ ಒಂದು ಪದ್ಧತಿಯಿಂದ ಹೆಣ್ಣು ಮಕ್ಕಳು ಮಣ್ಣು ಸೇರುವವರೆಗೂ ಶೋಷಣೆ ನಡೆಯುತ್ತಲೇ ಇರುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.ಗಂಡನನ್ನು ಕಳೆದುಕೊಂಡ ಹೆಣ್ಣು ಮಕ್ಕಳನ್ನು ಸಮಾಜ ಅತ್ಯಂತ ನಿಕೃಷ್ಟವಾಗಿ ಕಾಣುತ್ತದೆ. ಶುಭ ಸಂದರ್ಭಗಳಿಗೆ ಅವರು ಬರುವುದು ಅನಿಷ್ಟ ಎಂದು ಪರಿಗಣಿಸುತ್ತಾರೆ. ನಾಗರೀಕತೆ ಹೆಚ್ಚಾದಂತೆ ಅನಾಗರೀಕತೆ ಹೆಚ್ಚುತ್ತಿದೆ. ಮೂಢನಂಬಿಕೆಗೆ ಜನರು ಕಟ್ಟು ಬೀಳುತ್ತಿದ್ದಾರೆ ಎಂದು ವಿಷಾದಿಸಿದರು.
ಶಾಸಕ ರಮೇಶ್ ಬಂಡಿಸಿದ್ದೇಗೌಡರ ಪತ್ನಿ ಸುಮತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನವರಾತ್ರಿಯೂ ಶಕ್ತಿ ಹಬ್ಬ. ಹೆಣ್ಣು ಮಕ್ಕಳು ಧೃತಿಗೆಡದೆ ಶಕ್ತಿಯಿಂದ ಹೋರಾಟ ನಡೆಸಿ ತಮ್ಮ ಗುರಿ ಸಾಧಿಸಬೇಕು ಎಂದರು.
ಕಸಬಾ ಹೋಬಳಿಯ ಆಶಾ ಕಾರ್ಯಕರ್ತೆಯರು ಪರಿಸರ ಕಾಳಜಿ ಸಾರುವ ಗೀತೆ, ನಂತರ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಸೋಬಾನೆ ಪದ, ಜಾನಪದ ಗೀತೆ, ತತ್ವಪದಗಳನ್ನು ಸಾದರ ಪಡಿಸಲಾಯಿತು.