ದೆಹಲಿಯಲ್ಲಿ ಸ್ಫೋಟ: ದಾವಣಗೆರೆಯಲ್ಲಿ ಹೈ ಅಲರ್ಟ್‌

KannadaprabhaNewsNetwork |  
Published : Nov 11, 2025, 01:30 AM IST
10ಕೆಡಿವಿಜಿ7, 8, 9, 10-ದೆಹಲಿ ಸ್ಪೋಟದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದಾವಣಗೆರೆ ರೈಲ್ವೇ ನಿಲ್ದಾಣ, ಬಸ್ಸು ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಎಎಸ್‌ಸಿ ತಂಡ, ಶ್ವಾನದಳ ತಪಾಸಣೆ ಕೈಗೊಂಡಿರುವುದು. | Kannada Prabha

ಸಾರಾಂಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದ್ದು, ನಗರದ ಜನಸಂದಣಿ ಪ್ರದೇಶ, ರೈಲ್ವೆ, ಬಸ್‌ ನಿಲ್ದಾಣ, ಇತರೆ ಸ್ಥಳಗಳಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಗೆ ಎಎಸ್‌ಸಿ (anti-sabotage check) ತಂಡಗಳು ಹಾಗೂ ಶ್ವಾನದಳ ತಂಡಗಳು ಸೋಮವಾರ ರಾತ್ರಿಯಿಂದಲೇ ಭದ್ರತಾ ತಪಾಸಣೆಗೆ ಇಳಿದಿವೆ.

- ರೈಲು, ಬಸ್‌ ನಿಲ್ದಾಣ, ಸಾರ್ವಜನಿಕ ಸ್ಥಳದಲ್ಲಿ ಎಎಸ್‌ಸಿ ತಂಡ, ಶ್ವಾನದಳ ತಪಾಸಣೆ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದ್ದು, ನಗರದ ಜನಸಂದಣಿ ಪ್ರದೇಶ, ರೈಲ್ವೆ, ಬಸ್‌ ನಿಲ್ದಾಣ, ಇತರೆ ಸ್ಥಳಗಳಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಗೆ ಎಎಸ್‌ಸಿ (anti-sabotage check) ತಂಡಗಳು ಹಾಗೂ ಶ್ವಾನದಳ ತಂಡಗಳು ಸೋಮವಾರ ರಾತ್ರಿಯಿಂದಲೇ ಭದ್ರತಾ ತಪಾಸಣೆಗೆ ಇಳಿದಿವೆ.

ಜನದಟ್ಟಣೆಯ ಸರ್ಕಾರಿ, ಖಾಸಗಿ ಬಸ್‌ಗಳು, ಪ್ರಯಾಣಿಕರ ಬ್ಯಾಗ್, ಸೂಟ್ ಕೇಸ್, ಕಸದ ಬಾಕ್ಸ್‌, ಶೌಚಾಲಯ, ರಸ್ತೆ ಬದಿ ನಿಲ್ಲಿಸಿದ್ದ ಅನ್ಯ ಜಿಲ್ಲೆ, ರಾಜ್ಯಗಳ ನೋಂದಣಿಯ ವಾಹನಗಳು, ಸ್ಥಳೀಯ ನೋಂದಣಿಯ ನಿರ್ಜನ ಪ್ರದೇಶದಲ್ಲಿದ್ದ ವಾಹನಗಳಲ್ಲಿ ತಪಾಸಣೆ ಕೈಗೊಳ್ಳಲಾಯಿತು.

ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಸೂಚನೆಯಂತೆ ಎಎಸ್‌ಸಿ ತಂಡವು ದಿಢೀರನೇ ತಪಾಸಣೆ ಕಾರ್ಯಕ್ಕೆ ಮುಂದಾಗಿದ್ದು, ಸಹಜವಾಗಿಯೇ ಜನರೂ ಒಂದುಕ್ಷಣ ಆತಂಕಕ್ಕೊಳಗಾಗಿದ್ದರು. ಆದರೆ, ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರಿಶೀಲನಾ ಕಾರ್ಯವನ್ನು ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿದೆಯೆಂಬ ವಿಷಯ ತಿಳಿದ ನಂತರವಷ್ಟೇ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರುಬಿಟ್ಟರು.

ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಗಾಗಿ ಎಎಸ್‌ಸಿ ತಂಡಗಳು, ಶ್ವಾನದಳಗಳು ಈ ತಪಾಸಣೆ ಕಾರ್ಯವನ್ನು ಸೋಮವಾರ ರಾತ್ರಿಯಿಂದಲೇ ಮುಂದುವರಿಸಿವೆ. ನಗರ, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ನಾಕಾಬಂಧಿ, ಪೊಲೀಸ್ ಗಸ್ತು ಹೆಚ್ಚಿಸಲಾಗಿತ್ತು. ಸ್ವತಃ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳೇ ರಾತ್ರಿ ಗಸ್ತು ಕೈಗೊಳ್ಳುವ ಮೂಲಕ ಮುನ್ನಚ್ಚರಿಕೆ ವಹಿಸಿದ್ದು ಸಾರ್ವಜನಿಕ ವಲಯದಲ್ಲೂ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು.

- - -

-10ಕೆಡಿವಿಜಿ7, 8, 9, 10:

ದೆಹಲಿ ಸ್ಪೋಟದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದಾವಣಗೆರೆ ರೈಲ್ವೆ ನಿಲ್ದಾಣ, ಬಸ್ಸು ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಎಎಸ್‌ಸಿ ತಂಡ, ಶ್ವಾನದಳ ತಪಾಸಣೆ ಕೈಗೊಳ್ಳಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ