ಮದ್ದು ತಯಾರಿಸುವಾಗ ಸ್ಫೋಟ; ಓರ್ವ ಸಾವು

KannadaprabhaNewsNetwork |  
Published : Jul 21, 2024, 01:20 AM IST
ಪಾಮಲದಿನ್ನಿ ಗ್ರಾಮದಲ್ಲಿ ಮದ್ದು ತಯಾರಿಸುವಾಗ ಸ್ಫೋಟ ಸಂಭವಿಸಿದ ಶೆಡ್‌ | Kannada Prabha

ಸಾರಾಂಶ

ಮದ್ದು ತಯಾರಿಸುವ ವೇಳೆ ಆಕಸ್ಮಿಕ ಸ್ಫೋಟ ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮದ್ದು ತಯಾರಿಸುವ ವೇಳೆ ಆಕಸ್ಮಿಕ ಸ್ಫೋಟ ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತ ವ್ಯಕ್ತಿ. ಪಂಚಮಿ ಹಬ್ಬಕ್ಕಾಗಿ ಮದ್ದು ಹಾರಿಸಲು ಅನಧಿಕೃತವಾಗಿ ತಗಡಿನ ಶೆಡ್‌ ನಲ್ಲಿ ಮದ್ದು ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿ ಅವಘಡ ಉಂಟಾಗಿದೆ. ಸ್ಫೋಟದ ಬಳಿಕ ಎಲ್ಲೆಡೆ ಬೆಂಕಿ ಆವರಿಸಿದ್ದರಿಂದ ಮಲ್ಲಪ್ಪ ಸುಟ್ಟು ಕರಕಲಾಗಿದ್ದಾನೆ. ಶೆಡ್‌ನೊಳಗಿದ್ದ ಇನ್ನಿಬ್ಬರು ಗಂಭೀರ ಗಾರಗೊಂಡಿದ್ದು, ಚಿಕಿತ್ಸೆಗೆ ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!