)
ರಾಮನಗರ: ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲೀವಿಂಗ್ ಗೆ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಸೈ, ಎಎಸ್ಸೈ, ನಾಲ್ವರು ಪೇದೆ ಸೇರಿದಂತೆ ಆರು ಮಂದಿಯ ತಲೆದಂಡವಾಗಿದೆ.
ಮೇ 10ರಂದು ಪ್ರಧಾನಿ ಮೋದಿರವರು ಆರ್ಟ್ ಆಫ್ ಲೀವಿಂಗ್ ಗೆ ಭೇಟಿ ನೀಡುವ ಸಮಯದಲ್ಲಿ ಬಿಗಿ ಬಂದೋಬಸ್ತ್ ಕರ್ತವ್ಯಕ್ಕೆ ಈ ಆರು ಮಂದಿಯನ್ನು ನಿಯೋಜನೆ ಮಾಡಲಾಗಿತ್ತು. ಸ್ಫೋಟಕ ಪತ್ತೆಯಾದ ಸ್ಥಳದ ಬಳಿಯೇ ಇವರೆಲ್ಲರು ಭದ್ರತೆ ನೋಡಿಕೊಳ್ಳುತ್ತಿದ್ದರು. ಹಿಗಾಗಿ ಅಲರ್ಟ್ ಇರಲಿಲ್ಲ ಮತ್ತು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣ ನೀಡಿ ಪಿಎಸ್ಸೈ ದುರ್ಗೇಗೌಡ, ಎಎಸ್ಸೈ ಶಂಕರ್, ನಾಲ್ವರು ಪೇದೆಗಳನ್ನು ಅಮಾನತು ಮಾಡಲಾಗಿದೆ.
ವಿವಿಐಪಿಗಳು ಬರುವ ಮುನ್ನ ಇಡೀ ಮಾರ್ಗವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿ ಹದ್ದಿನ ಕಣ್ಣಿಡಬೇಕಾದದ್ದು ಪೊಲೀಸರ ಕರ್ತವ್ಯ. ಆದರೆ, ಸ್ಫೋಟಕಗಳು ಪತ್ತೆಯಾದ ಸ್ಥಳದಲ್ಲೇ ಇದ್ದರೂ ಪೊಲೀಸ್ ಸಿಬ್ಬಂದಿ ಯಾವುದೇ ರೀತಿಯ ಮುನ್ನೆಚ್ಚರಿಕೆ ವಹಿಸಿರಲಿಲ್ಲ ಮತ್ತು ಅಲರ್ಟ್ ಆಗಿರಲಿಲ್ಲ ಎಂಬುದು ಉನ್ನತ ಮಟ್ಟದ ತನಿಖೆಯಿಂದ ಸಾಬೀತಾಗಿದೆ.ಕರ್ತವ್ಯ ವೇಲೆ ತೋರಿದ ಈ ನಿರ್ಲಕ್ಷ್ಯ ಪ್ರಧಾನಮಂತ್ರಿಗಳ ಸುರಕ್ಷತೆಗೆ ಧಕ್ಕೆ ತರುವಂತಹ ಗಂಭೀರ ಲೋರ ಎಂದು ಪರಿಗಣಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆರು ಮಂದಿಯನ್ನು ಅಮಾನುತಗೊಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಒಂದು ಪತ್ತೆಯಾಗಿತ್ತು.
ಆ ಬಾಕ್ಸ್ನಲ್ಲಿ ಏನಿತ್ತು?: