ಸಕಲೇಶಪುರ ತಾಲೂಕಲ್ಲಿ ವ್ಯಾಪಕ ಮಳೆ

KannadaprabhaNewsNetwork |  
Published : Jun 25, 2025, 12:33 AM IST
24ಎಚ್ಎಸ್ಎನ್12: ಹೆತ್ತೂರು ಗ್ರಾಮದ ಗೌರಮ್ಮ ಎಂಬುವವರ ಮನೆ ಮಳೆಯಿಂದಾಗಿ ಭಾಗಶಃ ಕುಸಿದಿದೆ. ಮನೆಯಲ್ಲಿ ಯಾರು ಇಲ್ಲ ದ ಕಾರಣ ಯಾವುದೆ ಅನಾಹುತ ಸಂಭವಿಸಿಲ್ಲ. | Kannada Prabha

ಸಾರಾಂಶ

ಸಕಲೇಶಪುರ ತಾಲೂಕಿನಲ್ಲಿ ಆರಿದ್ರ್ಯಾ ಮಳೆಯ ಅಬ್ಬರ ಮುಂದುವರಿದಿದ್ದು ಸೋಮವಾರ ಸಂಜೆಯಿಂದ ಬಿರುಸು ಪಡೆದಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದ್ದರೆ, ಮಳೆಯಿಂದಾಗಿ ಹೇಮಾವತಿ ನದಿಯ ಒಡಲು ತುಂಬಿ ಹರಿಯುತ್ತಿದೆ. ತಾಲೂಕಿನ ಪ್ರಮುಖ ನದಿಗಳೆಲ್ಲವೂ ಸಹ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆಯಿಂದಾಗಿ ಚಳಿ ಹೆಚ್ಚಿದ್ದು ಜನರು ಮನೆಬಿಟ್ಟು ಹೊರಬಾರದ ಕಾರಣ ಪಟ್ಟಣ ಸೇರಿದಂತೆ ಹೋಬಳಿ ಕೇಂದ್ರದ ರಸ್ತೆಗಳು ನಿರ್ಜನಗೊಂಡಿವೆ.

ಸಕಲೇಶಪುರ: ತಾಲೂಕಿನಲ್ಲಿ ಆರಿದ್ರ್ಯಾ ಮಳೆಯ ಅಬ್ಬರ ಮುಂದುವರಿದಿದ್ದು ಸೋಮವಾರ ಸಂಜೆಯಿಂದ ಬಿರುಸು ಪಡೆದಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದ್ದರೆ, ಮಳೆಯಿಂದಾಗಿ ಹೇಮಾವತಿ ನದಿಯ ಒಡಲು ತುಂಬಿ ಹರಿಯುತ್ತಿದೆ. ತಾಲೂಕಿನ ಪ್ರಮುಖ ನದಿಗಳೆಲ್ಲವೂ ಸಹ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದ್ದರೆ ದೊಡ್ಡತಪ್ಲೆ ಗ್ರಾಮ ಸಮೀಪದ ಹೆದ್ದಾರಿ ಸಮೀಪವಿರುವ ಗುಡ್ಡದಿಂದ ಭಾರಿ ಪ್ರಮಾಣದಲ್ಲಿ ಅಂತರ್ಜಲ ಉಕ್ಕಿ ಹರಿಯುತ್ತಿದ್ದು ವಾಹನ ಸವಾರರ ಆತಂಕ ಇಮ್ಮಡಿ ಮಾಡಿದೆ. ಇಲ್ಲಿ ಗುಡ್ಡ ಯಾವ ಸಂದರ್ಭದಲ್ಲೂ ಬೇಕಿದ್ದರೂ ಹೆದ್ದಾರಿಗೆ ಕುಸಿಯುವ ಸಾಧ್ಯತೆ ದಟ್ಟವಾಗಿದೆ. ಮಳೆಯಿಂದಾಗಿ ಚಳಿ ಹೆಚ್ಚಿದ್ದು ಜನರು ಮನೆಬಿಟ್ಟು ಹೊರಬಾರದ ಕಾರಣ ಪಟ್ಟಣ ಸೇರಿದಂತೆ ಹೋಬಳಿ ಕೇಂದ್ರದ ರಸ್ತೆಗಳು ನಿರ್ಜನಗೊಂಡಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಮಹತ್ವ ತಿಳಿದುಕೊಳ್ಳಲಿ: ಅಪರ ಜಿಲ್ಲಾಧಿಕಾರಿ
ಸ್ಮಶಾನದ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಲು ಆಗ್ರಹ