ರಾಮನಗರ: ವಿದ್ಯಾರ್ಥಿಗಳ ಶೈಕ್ಷಣಕಿ ಜೀವನದ ಯಶಸ್ಸಿಗೆ ಶಿಕ್ಷಣದಷ್ಟೇ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳೂ ಮುಖ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಎಂ.ಮರಿಸ್ವಾಮಿ ಅಭಿಪ್ರಾಯಪಟ್ಟರು.
ಕಾಲೇಜು ಪ್ರಾಂಶುಪಾಲ ಡಾ.ಡಿ.ಆರ್.ರವಿಕುಮಾರ್ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಜ್ಞಾನ, ಬೆಳಕು, ಭರವಸೆ, ಸಾಧನೆ ಎಂಬ ಆಶಯಗಳ ಮೇಲೆ ಆರಂಭವಾದ ಕಾಲೇಜಿನಲ್ಲಿ ಹಲವು ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ಹೊರಹೊಮ್ಮಿರುವುದು ನಮಗೆ ಹೆಮ್ಮೆಯ ವಿಷಯ. ಕೇವಲ ಪಠ್ಯಕ್ಕಷ್ಟೇ ಸೀಮಿತರಾಗದೆ ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕ ಎಂದು ಹೇಳಿದರು.
ಗ್ರಾಮೀಣ ಪರಿಸರದಲ್ಲಿ ಲಭ್ಯವಿರುವ ಪ್ರಕೃತಿ, ಕೃಷಿ ಮತ್ತು ನಿತ್ಯಜೀವನದ ಉದಾಹರಣೆಗಳನ್ನು ಬಳಸಿ ಕಲಿಯುವುದರಿಂದ ವಿಷಯಗಳು ದೀರ್ಘಕಾಲ ವಿದ್ಯಾರ್ಥಿಗಳ ನೆನಪಿನಲ್ಲಿ ಉಳಿಯುತ್ತವೆ. ತಂತ್ರಜ್ಞಾನವನ್ನು ಕೇವಲ ಮನರಂಜನೆಗೆ ಬಳಸದೆ, ದೇಶ-ವಿದೇಶಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಘಟನಾವಳಿಗಳ ಮಾಹಿತಿ ಪಡೆಯಲು ಉಪಯೋಗಿಸಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.ಸುಪ್ರೀಂಕೋರ್ಟ್ ವಕೀಲ ಎಚ್.ಬಿ.ಶಿವರಾಜು ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಸೂಕ್ತ ಅವಕಾಶ, ಸರಿಯಾದ ಮಾರ್ಗದರ್ಶನ ಮತ್ತು ಆಧುನಿಕ ಸಂಪನ್ಮೂಲಗಳ ಪರಿಚಯ ದೊರೆತಾಗ ನಗರ ಪ್ರದೇಶದ ಮಕ್ಕಳಂತೆ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಶಿಕ್ಷಣ, ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನವನ್ನು ಸಮತೋಲನದಲ್ಲಿಟ್ಟುಕೊಂಡು ಮುನ್ನಡೆಯುವುದು ಅವರ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಳೆದ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರಿಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಾಣಿಜ್ಯ ವಿಭಾಗದಿಂದ ಎಚ್.ಸಿ.ಲಾವಣ್ಯ , ಎಲ್.ಸಿಂಚನಾ, ಬಿ.ಎಸ್. ಸಂಜನಾ, ವೈಶಾಖ್ ಸಿ.ಗೌಡ, ಸಿ.ಯಶಸ್ವಿನಿ, ವಿಜ್ಞಾನ ವಿಭಾಗದಿಂದ ಎ.ನೇತ್ರಾವತಿ, ಆರ್. ಹರ್ಷಿತ್ ಗೌಡ, ಕೆ.ಸಿಂಚನಾ ಅವರನ್ನು ಗೌರವಿಸಲಾಯಿತು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಕಾಲೇಜು ವಿದ್ಯಾರ್ಥಿಗಳು ಸಾಮಾಜಿಕ ಸಂದೇಶ ನೀಡುವ ಕಿರು ನಾಟಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ರಾಮನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ, ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಸಂಸ್ಥಾಪಕರ ದಿನಾಚರಣೆಯ ಎಕ್ಸ್ ಪರ್ಟ್ ಪರ್ವ ಸಮಾರಂಭದಲ್ಲಿ ಅತಿಥಿಗಳು ಪಾಲ್ಗೊಂಡಿರುವುದು.