ಶಿರಾದಲ್ಲಿ ವಿಜೃಂಭಣೆಯ ಮಹೋತ್ಸವ

KannadaprabhaNewsNetwork |  
Published : Jan 11, 2025, 12:47 AM IST
10ಶಿರಾ4: ಶಿರಾ ನಗರದ ಶ್ರೀ ಲಕ್ಷಿ÷್ಮ ನಾರಾಯಣ ಸ್ವಾಮಿ ದೇವಸ್ಥಾನಕ್ಕೆ ವೈಕುಂಠ ಏಕಾದಶಿ ಪ್ರಯುಕ್ತ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಆರ್ ರಾಮು, ಮಾಜಿ ಸುಡಾ ಅಧ್ಯಕ್ಷ ಮಾರುತೇಶ್, ಮಂಜೇಶ್, ದ್ವಾರಳು ಬಾಲಕೃಷ್ಣ, ಹುಳಿಗೆರೆ ರಾಜಣ್ಣ, ಕೋಟೆ ರವಿಕುಮಾರ್, ಕೋಟೆ ಬಾಬು, ಸಾಗರ್, ನರೇಂದ್ರ, ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ವೈಕುಂಠ ಏಕಾದಶಿ ಪ್ರಯುಕ್ತ ಶಿರಾ ನಗರ ಸೇರಿದಂತೆ ತಾಲೂಕಿನಾದ್ಯಂತ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರನ್ನು ವೀಕ್ಷಿಸಿ ಪೂಜೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶಿರಾ ವೈಕುಂಠ ಏಕಾದಶಿ ಪ್ರಯುಕ್ತ ಶಿರಾ ನಗರ ಸೇರಿದಂತೆ ತಾಲೂಕಿನಾದ್ಯಂತ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರನ್ನು ವೀಕ್ಷಿಸಿ ಪೂಜೆ ಸಲ್ಲಿಸಿದರು. ನಗರದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ, ಶ್ರೀ ಬಾಲಾಜಿ ದೇವಸ್ಥಾನ, ಶ್ರೀ ಪಾಂಡುರಂಗ ರುಕ್ಮಿಣಿ ದೇವಸ್ಥಾನ, ಶ್ರೀ ವಿದ್ಯಾಗಣಪತಿ ದೇವಸ್ಥಾನ, ತಾಲೂಕಿನ ರತ್ನಸಂದ್ರ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ, ಮರಡಿ ಗುಡ್ಡದ ಶ್ರೀ ಮರಡಿ ರಂಗನಾಥ ಸ್ವಾಮಿ ದೇವಸ್ಥಾನ, ತಾವರೆಕೆರೆ ಶ್ರೀ ಬಂಡೀ ರಂಗನಾಥ ಸ್ವಾಮಿ ದೇವಸ್ಥಾನ, ಬುಕ್ಕಾಪಟ್ಟಣ ಪೇಟೆ ಬೀದಿ ತಿಮ್ಮಪ್ಪ ಸ್ವಾಮಿ ದೇವಸ್ಥಾನ, ಮಾಗೋಡು ಶ್ರೀ ಕಂಬದ ರಂಗನಾಥ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ರಾತ್ರಿವರೆಗೂ ಪೂಜಾ ಕೈಂಕರ್ಯಗಳು, ಭಜನೆ, ಪ್ರಸಾದ ಮಿನಿಯೋಗ ನಡೆಯಿತು. ಪೂಜಾ ಕಾರ್ಯದಲ್ಲಿ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ, ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್.ಉಗ್ರೇಶ್, ನಗರಸಭಾ ಸದಸ್ಯ ಆರ್.ರಾಮು ಸೇರಿದಂತೆ ಹಲವರು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ