ಅರಸು ಜಯಂತಿಯಲ್ಲಿ ಕಣ್ಮನ ಸೆಳೆದ ಕಲಾ ಸಂಸ್ಕೃತಿಯ ಮೆರವಣಿಗೆ

KannadaprabhaNewsNetwork |  
Published : Sep 20, 2025, 01:00 AM IST
6.ರಾಮನಗರದಲ್ಲಿ ನಡೆದ ದೇವರಾಜ ಅರಸು ಜಯಂತಿಯ ಅಂಗವಾಗಿ ಅರಸು ಅವರ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು. | Kannada Prabha

ಸಾರಾಂಶ

ರಾಮನಗರ: ಸಾಮಾಜಿಕ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜಯಂತಿ ಪ್ರಯುಕ್ತ ಬೆಳ್ಳಿ ರಥದಲ್ಲಿ ಅರಸುರವರ ಭಾವಚಿತ್ರ ಇರಿಸಿ ನಡೆಸಿದ ಮೆರವಣಿಗೆಯಲ್ಲಿ ಹಿಂದುಳಿದ ಸಮುದಾಯಗಳ ಜನರು ಪ್ರದರ್ಶಿಸಿದ ಕಲೆ ಮತ್ತು ಸಂಸ್ಕೃತಿ ಕಣ್ಮನ ಸೆಳೆಯಿತು.

ರಾಮನಗರ: ಸಾಮಾಜಿಕ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜಯಂತಿ ಪ್ರಯುಕ್ತ ಬೆಳ್ಳಿ ರಥದಲ್ಲಿ ಅರಸುರವರ ಭಾವಚಿತ್ರ ಇರಿಸಿ ನಡೆಸಿದ ಮೆರವಣಿಗೆಯಲ್ಲಿ ಹಿಂದುಳಿದ ಸಮುದಾಯಗಳ ಜನರು ಪ್ರದರ್ಶಿಸಿದ ಕಲೆ ಮತ್ತು ಸಂಸ್ಕೃತಿ ಕಣ್ಮನ ಸೆಳೆಯಿತು.

ನಗರದ ಕೆಂಪೇಗೌಡ ವೃತ್ತದಿಂದ ಆರಂಭವಾದ ಮೆರವಣಿಗೆ ಹಳೇ ಬಸ್ ನಿಲ್ದಾಣದಿಂದ ಎಂ.ಜಿ.ರಸ್ತೆ ಮಾರ್ಗವಾಗಿ ಪ್ರಮುಖ ರಸ್ತೆಗಳಲ್ಲಿ ಸಾಗಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕೊನೆಗೊಂಡಿತು.

ಈ ಮೆರವಣಿಗೆಯಲ್ಲಿ ಕುಂಬಾರ ಸಮುದಾಯದ ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರೆ,

ಕುರುಬು ಸಮುದಾಯದವರು ಡೊಳ್ಳು ಕುಣಿತ, ವೀರಗಾಸೆ, ಈಡಿಗ ಮತ್ತು ರಜಪೂತ ಸಮುದಾಯದವರ ಐತಿಹ್ಯ ಬಿಂಬಿಸುವ ಸ್ಥಬ್ಧಚಿತ್ರಗಳು, ರಾಧಾಕೃಷ್ಣ ವೇಷ ಸೇರಿದಂತೆ ಹಿಂದುಳಿದ ಸಮುದಾಯದ ಕುಲದ ಐತಿಹಾಸಿಕ ಪುರುಷರನ್ನು ಬಿಂಬಿಸುವ ವೇಷಭೂಷಣಗಳು ಮೆರವಣಿಗೆಯಲ್ಲಿ ಗಮನಸೆಳೆದವು.

ಸವಿತಾ ಸಮಾಜದ 500 ಮಂದ ಒಟ್ಟಾಗಿ ಬಾರಿಸಿದ ನಾದಸ್ವರ, ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ತುಂಬಿದವು.

ವೇದಿಕೆ ಕಾರ್ಯಕ್ರಮದಲ್ಲಿ ಹಿಂದುಳಿದ ಸಮುದಾಯದಲ್ಲಿ ಸಾಧನೆ ಮಾಡಿದ 5 ಮಂದಿ ಸಾಧಕರಿಗೆ ತಲಾ 25 ಸಾವಿರ ನಗದು, ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರನ್ನು ಸನ್ಮಾನಿಸಲಾಯಿತು.

19ಕೆಆರ್ ಎಂಎನ್ 6,7.ಜೆಪಿಜಿ

6.ರಾಮನಗರದಲ್ಲಿ ನಡೆದ ದೇವರಾಜ ಅರಸು ಜಯಂತಿಯ ಅಂಗವಾಗಿ ಅರಸು ಅವರ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು.

7.ಅರಸು ಜಯಂತಿ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿಯಲ್ಲಿ 6 ಸಾವಿರ ಮಹಿಳೆಯರಿಂದ ಶಿವಬಸವ ಬುತ್ತಿ ಮೆರವಣಿಗೆ
ಪ್ರಾಣಿಪ್ರಿಯರನ್ನು ಆಕರ್ಷಿಸಿದ ಶ್ವಾನ ಪ್ರದರ್ಶನ