ಮಂಜುನಾಥ ಕೆ.ಎಂ.
ಇನ್ನು ಮುಂದೆ ಸರ್ಕಾರಿ ಶಾಲೆ ಶಿಕ್ಷಕರು, ಸಿಬ್ಬಂದಿ ನಾನಾ ಕಾರಣವೊಡ್ಡಿ ಶಾಲೆಗೆ ತಡವಾಗಿ ಬರುವಂತಿಲ್ಲ. ಶಾಲೆಗೆ ಚಕ್ಕರ್ ಹೊಡೆದು ಅಲ್ಲಲ್ಲಿ ಓಡಾಡುವಂತಿಲ್ಲ.
ರಾಜ್ಯ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದಿಂದ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಲೊಕೇಶನ್, ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಿದೆ. ನಿರ್ದಿಷ್ಟ ಸಮಯ ಮೀರಿ ಶಾಲೆಗೆ ಹಾಜರಾದರೆ ಆ ದಿನ ಆಕಸ್ಮಿಕ ರಜೆಯೆಂದೇ ಪರಿಗಣಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಕೆಎಎಎಂಎಸ್) ಆ್ಯಪ್ ರೂಪಿಸಲಾಗಿದೆ.ಶುಕ್ರವಾರದಿಂದಲೇ ರಾಜ್ಯಾದ್ಯಂತ ಈ ನಿಯಮ ಜಾರಿಗೊಂಡಿದೆ. ಇನ್ಮುಂದೆ ಸರ್ಕಾರಿ ಶಾಲೆ ಶಿಕ್ಷಕರು ನಿರ್ದಿಷ್ಟ ಅವಧಿಯೊಳಗೆ ಶಾಲೆಗೆ ಹಾಜರಾಗಿ ದಿನಕ್ಕೆರೆಡು ಬಾರಿ ಲೊಕೇಶನ್, ಫೇಸ್ ಆಧರಿತ ಹಾಜರಾತಿ ಹಾಕಬೇಕಾಗಿದೆ. ಸರ್ಕಾರದ ಈ ನಿಲುವನ್ನು ಪೋಷಕರು, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಶಿಕ್ಷಕರ ವಲಯ ಸ್ವಾಗತಿಸಿದೆ. ಇನ್ನೊಂದು ತಿಂಗಳಲ್ಲಿ ವಿದ್ಯಾರ್ಥಿಗಳಿಗೂ ಎಐ ಆಧಾರಿತ ಹಾಜರಾತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರ ಪೈಕಿ ಕೆಲವರು ಶಾಲೆಗೆ ಹಾಜರಾಗದೆ ಹಾಜರಾತಿ ಪಡೆದುಕೊಂಡು ಸಂಬಳ ಮಾಡಿಕೊಳ್ಳುತ್ತಿದ್ದರು. ಕೆಲವರು ಮುಖ್ಯಗುರುಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಹಾಜರಾತಿ ಪಡೆದುಕೊಂಡರೆ, ಇನ್ನು ಕೆಲವರು ಸಂಘಟನೆ ಹೆಸರಿನಲ್ಲಿ ಓಡಾಡಿಕೊಂಡು ಶಾಲೆಗೆ ಗೈರಾಗುತ್ತಿದ್ದರು. ಶಾಲೆಗೆ ಗೈರಾಗುವುದನ್ನೇ ಕಾಯಕ ಮಾಡಿಕೊಂಡ ಅನೇಕ ಶಿಕ್ಷಕರು ಶಾಲೆಯ ಮುಖ ನೋಡುವುದೇ ಅಪರೂಪ ಎನ್ನುವಂತಾಗಿತ್ತು.
ಶಿಕ್ಷಕರ ಕಡ್ಡಾಯ ಹಾಜರಾತಿ ಸಂಬಂಧ ಕೈಗೊಂಡ ತಂತ್ರಜ್ಞಾನ ಆಧರಿತ ಹಾಜರಾತಿ ಬಗ್ಗೆ ನಿರ್ಲಕ್ಷಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ನಿಗದಿತ ಶಾಲಾ ಅವಧಿ ಮುಗಿಯುವ ಮುನ್ನವೇ ಚೆಕ್ಔಟ್ ಆದಲ್ಲಿ ಆರಂಭಿಕ ನಿರ್ಗಮನ (Early Departure) ಎಂದು ಪರಿಗಣಿಸಿ, ಅದನ್ನು ಕರ್ತವ್ಯದ ಅವಗಣನೆ ಅಥವಾ ಕರ್ತವ್ಯ ಲೋಪ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಅರ್ಧ ದಿನದ ರಜೆ ಕಡಿತವಾಗಲಿದೆ.
ಬಿಇಒ ನೋಟಿಸ್:
ರಿಯಾಯಿತಿ ದರ ಅರ್ಧ ಗಂಟೆಗೆ ಹೆಚ್ಚಿಸಲಿ:
----
ಶಿಕ್ಷಕರಿಗೆ ಲೊಕೇಶನ್, ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಲಾಗಿದೆ. ಶಿಕ್ಷಕರು ಇಲಾಖೆಯ ಸೂಚನೆಯಂತೆ ನಿಗದಿತ ಸಮಯಕ್ಕೆ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಇಲ್ಲದಿದ್ದರೆ ಇಲಾಖೆ ಕ್ರಮ ಎದುರಿಸಬೇಕು.
-ಬಿ.ಉಮಾದೇವಿ, ಡಿಡಿಪಿಐ ಬಳ್ಳಾರಿ.