ತಾಪಂ, ಜಿಪಂ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಿ: ಸಚಿವ ಡಿ.ಸುಧಾಕರ್

KannadaprabhaNewsNetwork |  
Published : Apr 27, 2025, 01:32 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್  | Kannada Prabha

ಸಾರಾಂಶ

ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು ಕಾರ್ಯಕರ್ತರು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಸಜ್ಜಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.

ಕಾಂಗ್ರೆಸ್‌ ಕಾರ್ಯಕರ್ತರಿಗೆ ಸಲಹೆ । ‘ಪಕ್ಷದ ನಡೆ ಕಾರ್ಯಕರ್ತರ ಕಡೆ’ ವಿಶೇಷ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು ಕಾರ್ಯಕರ್ತರು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಸಜ್ಜಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ, ನಗರ ಮತ್ತು ಗ್ರಾಮಾಂತರ ಮಂಡಲದ ವತಿಯಿಂದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ಪಕ್ಷದ ನಡೆ ಕಾರ್ಯಕರ್ತರ ಕಡೆ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಚುನಾವಣೆಗಳು ಬರುತ್ತಿದ್ದು, ಕಾರ್ಯಕರ್ತರಲ್ಲಿ ಹುರುಪು ತುಂಬುವುದಕ್ಕಾಗಿ ಈ ಕಾರ್ಯಕ್ರಮ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಐದು ಉಚಿತ ಗ್ಯಾರಂಟಿಗಳಿಗೆ ವರ್ಷಕ್ಕೆ 57 ಸಾವಿರ ಕೋಟಿ ರು. ಖರ್ಚಾಗುತ್ತಿದೆ. ಬಿಜೆಪಿಯವರು ಮೂರು ಲಕ್ಷ ಕೋಟಿ ರು.ಸಾಲ ಹೊರಿಸಿ ಹೋಗಿದ್ದಾರೆ. ಇವೆಲ್ಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಭಾಯಿಸಿಕೊಂಡು ಭದ್ರಾ ಮೇಲ್ದಂಡೆಗೆ 2600 ಕೋಟಿ ರು. ಕೊಟ್ಟಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ರಾಮಕೃಷ್ಣಪ್ಪ ಮಾತನಾಡಿ, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಘೋಷಿಸಿದಂತೆ ಅಧಿಕಾರಕ್ಕೆ ಬಂದ ಕೂಡಲೆ ಐದು ಉಚಿತ ಗ್ಯಾರೆಂಟಿಗಳನ್ನು ರಾಜ್ಯದ ಜನರಿಗೆ ನೀಡಿತು. ಅದು ಪ್ರತಿ ಮನೆಗೆ ತಲುಪುತ್ತಿದೆಯೋ ಇಲ್ಲವೋ ಎನ್ನುವುದರ ಕಡೆ ಕಾರ್ಯಕರ್ತರು ನಿಗಾ ವಹಿಸಬೇಕು ಎಂದರು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡಿ, 25 ವರ್ಷಗಳ ನಂತರ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೆಂದರೆ ಕಾರ್ಯಕರ್ತರೇ ಕಾರಣ. ಐವತ್ತು ಸಾವಿರ ಮತಗಳ ಅಂತರದಿಂದ ನೀವು ನನ್ನನ್ನು ಗೆಲ್ಲಿಸಿದ್ದೀರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಪಂಚ ಗ್ಯಾರಂಟಿಗಳಿಂದ ಬಡವರ ಜೀವನ ಸುಧಾರಣೆಯಾಗಿದೆ. ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ, 2023ರಲ್ಲಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಶ್ರಮವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕರ್ತರ ಒಡನಾಡಿಯಾಗಿ ಕೆಲಸ ಮಾಡುತ್ತ ಅಹವಾಲುಗಳನ್ನು ಆಲಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದ ಪ್ರಣಾಳಿಕೆಯಂತೆ ಎಲ್ಲವನ್ನು ಈಡೇರಿಸಿದೆ ಎಂದು ಹೇಳಿದರು.

ಕಾಂಗ್ರೆಸ್ ಬೆಲೆ ಏರಿಸಿದೆ ಎಂದು ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸಿ ನಮ್ಮ ಪಕ್ಷದ ಬಗ್ಗೆ ಅಪ ಪ್ರಚಾರ ಮಾಡುತ್ತಿದೆ. ರಾಜ್ಯದಲ್ಲಿ ಎಲ್ಲಿಯೂ ಜನ ಆಕ್ರೋಶಗೊಂಡಿಲ್ಲ. ಪಕ್ಷದಲ್ಲಿ ಸ್ಥಾನಮಾನ ಸಿಗಲಿಲ್ಲವೆಂಬ ಮುನಿಸು ಬೇಡ ಎಂದರು.

ಶಾಸಕ ಬಿ.ಜಿ.ಗೋವಿಂದಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ವಿಜಯಕುಮಾರ್, ಆರ್.ಶಿವಣ್ಣ, ಕೆ.ಅನ್ವರ್ ಭಾಷಾಷ, ಮುನಿರಾ ಎ.ಮಕಾಂದಾರ್, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರಾದ ಕುಮಾರ್‍ಗೌಡ, ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್‍ ಖುದ್ದೂಸ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಸುದರ್ಶನ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ನಗರಸಭೆ ಮಾಜಿ ಅಧ್ಯಕ್ಷರಾದ ಎಚ್.ಮಂಜಪ್ಪ, ಸಿ.ಟಿ.ಕೃಷ್ಣಮೂರ್ತಿ, ಎಚ್.ಸಿ.ನಿರಂಜನಮೂರ್ತಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತ ನಂದಿನಿಗೌಡ, ಮೋಕ್ಷ ರುದ್ರಸ್ವಾಮಿ, ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷ ಎಸ್.ಜಯಣ್ಣ, ಎಸ್ಟಿ ವಿಭಾಗದ ಅಧ್ಯಕ್ಷ ಮಂಜುನಾಥ್, ಪ್ರಕಾಶ್ ರಾಮನಾಯ್ಕ, ಹನೀಸ್, ಜಿ.ವಿ.ಮಧುಗೌಡ, ಮೋಹನ್ ಪೂಜಾರಿ, ಯು.ಲಕ್ಷ್ಮಿಕಾಂತ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌