ಒಕ್ಕಲಿಗ ಸಮುದಾಯಕ್ಕೆ ಸೌಲಭ್ಯ ತಪ್ಪಿಸಲಾಗುತ್ತಿದೆ: ವಿ.ಎಂ.ಕುಮಾರಗೌಡ

KannadaprabhaNewsNetwork |  
Published : Nov 08, 2025, 01:45 AM IST
6ಕೆಎಂಎನ್ ಡಿ21 | Kannada Prabha

ಸಾರಾಂಶ

ಒಕ್ಕಲಿಗರು ಶೇ.100ರಷ್ಟು ಕೃಷಿಕರು. ಭೂಮಿ ನಂಬಿ ನಾಡಿಗೆ ಅನ್ನ ಬೆಳೆಯುತ್ತಿರುವ ಒಕ್ಕಲಿಗರು ಇಂದು ತೀವ್ರವಾದ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಒಕ್ಕಲಿಗರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಇಲ್ಲ. ಪ್ರಾಕೃತಿಕ ವಿಕೋಪಗಳು ಮತ್ತಿತರ ಕಾರಣಗಳಿಂದ ಬೆಳೆ ನಷ್ಟಕ್ಕೊಳಗಾದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ವೈಜ್ಞಾನಿಕ ಪರಿಹಾರ ನೀಡುತ್ತಿಲ್ಲ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕೃಷಿಯನ್ನೆ ನಂಬಿ ಬದುಕುತ್ತಿರುವ ಒಕ್ಕಲಿಗ ಸಮುದಾಯ ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ. ಸಮುದಾಯವನ್ನು ಪ್ರಬಲ ಜಾತಿ ಎಂದು ಬಿಂಬಿಸುವ ಮೂಲಕ ಎಲ್ಲ ಬಗೆಯ ಸಾಮಾಜಿಕ ಸೌಲಭ್ಯಗಳಿಂದ ವಂಚಿಸಲಾಗುತ್ತಿದೆ ಎಂದು ತಾಲೂಕು ಒಕ್ಕಲಿಗರ ವೇದಿಕೆ ಅಧ್ಯಕ್ಷ ವಳಗೆರೆ ಮೆಣಸ ವಿ.ಎಂ.ಕುಮಾರಗೌಡ ಹೇಳಿದರು.

ತಾಲೂಕಿನ ರಂಗನಾಥಪುರ ಕ್ರಾಸ್‌ನಲ್ಲಿ ನಡೆದ ಹೋಬಳಿ ಮಟ್ಟದ ಒಕ್ಕಲಿಗರ ವೇದಿಕೆ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಒಕ್ಕಲಿಗರ ಸಮುದಾಯವನ್ನು ಅತ್ಯಂತ ಹಿಂದುಳಿದ ಸಮುದಾಯ ಎಂದು ಪರಿಗಣಿಸಿ ಪರಿಶಿಷ್ಟ ಜಾತಿ ವರ್ಗಗಳಿಗೆ ನೀಡುತ್ತಿರುವ ಮಾದರಿಯಲ್ಲಿಯೇ ವಿಶೇಷ ಸೌಲಭ್ಯ ನೀಡುವಂತೆ ಒತ್ತಾಯಿಸಿದರು.

ಒಕ್ಕಲಿಗರು ಶೇ.100ರಷ್ಟು ಕೃಷಿಕರು. ಭೂಮಿ ನಂಬಿ ನಾಡಿಗೆ ಅನ್ನ ಬೆಳೆಯುತ್ತಿರುವ ಒಕ್ಕಲಿಗರು ಇಂದು ತೀವ್ರವಾದ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಒಕ್ಕಲಿಗರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಇಲ್ಲ. ಪ್ರಾಕೃತಿಕ ವಿಕೋಪಗಳು ಮತ್ತಿತರ ಕಾರಣಗಳಿಂದ ಬೆಳೆ ನಷ್ಟಕ್ಕೊಳಗಾದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ವೈಜ್ಞಾನಿಕ ಪರಿಹಾರ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರದ ಯೋಜನೆಗಳಿಗಾಗಿ ಭೂ ಸ್ವಾಧೀನ ಮಾಡಿಕೊಂಡರೆ ಭೂಮಿ ಕಳೆದುಕೊಂಡ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುತ್ತಿಲ್ಲ. ರಾಜ್ಯದ ಶೇ.70ರಷ್ಟು ಒಕ್ಕಲಿಗರು ಸಣ್ಣ ಸಣ್ಣ ಹಿಡುವಳಿದಾರರಾಗಿದ್ದು ಇಂದು ಭೂಮಿಯನ್ನೆ ನಂಬಿ ಬದುಕಲಾರದ ಪರಿಸ್ಥಿತಿಯಲ್ಲಿ ಒಕ್ಕಲಿಗ ಜನಾಂಗವಿದೆ ಎಂದರು.

ಅಹಿಂದ ಮತಗಳ ಬೆನ್ನು ಬಿದ್ದಿರುವ ಒಕ್ಕಲಿಗ ರಾಜಕಾರಣಿಗಳು ಒಕ್ಕಲಿಗರ ಹಿತಾಸಕ್ತಿಗಳಿಗಾಗಿ ಪೂರಕವಾಗಿ ಸದನದ ಒಳಗೆ ಮತ್ತು ಹೊರಗೆ ಗಟ್ಟಿ ಧ್ವನಿ ಎತ್ತುತ್ತಿಲ್ಲ. ಒಕ್ಕಲಿಗರು ತಮ್ಮ ಮುಂದಿನ ಪೀಳಿಗೆಯ ಭವಿಷ್ಯ ನಿರ್ಮಾಣಕ್ಕಾಗಿ ಸಂವಿಧಾನ ಬದ್ಧವಾದ ಸವಲತ್ತುಗಳನ್ನು ಪಡೆದುಕೊಳ್ಳಲು ಸಂಘಟಿತರಾಗಬೇಕಾಗಿದೆ ಎಂದು ಕರೆ ನೀಡಿದರು.

ತಾಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್ ಮಾತನಾಡಿದರು. ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಮುಖಂಡರಾದ ಲೋಕೇಶ್, ಮಹದೇವೇಗೌಡ, ಕಿರಣ್‌ಕುಮಾರ್, ಮಹದೇವೇಗೌಡ, ಬಿಜೆಪಿ ಮುಖಂಡ ಭಾರತೀಪುರ ಪುಟ್ಟಣ್ಣ, ದಿವಾಕರ್, ಸ್ವಾಮೀಗೌಡ, ಕೋಟಹಳ್ಳಿ ಶ್ರೀನಿವಾಸ್ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!