ಮಾಗಡಿ: ಪಟ್ಟಣದ 18ನೇ ವಾರ್ಡ್ ಕಲ್ಯಾಗೇಟ್ ಮತ್ತು ಅಕ್ಕಪಕ್ಕದ ವಾರ್ಡ್ ಗಳಿಗೆ ಅನುಕೂಲವಾಗಲೆಂದು ಈ ಭಾಗದಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲಾಗಿದೆ ಎಂದು ಶಾಸಕ ಎಚ್.ಸಿ ಬಾಲಕೃಷ್ಣ ತಿಳಿಸಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್ ಮಾತನಾಡಿ, ಪಟ್ಟಣದ ಟಿಎಪಿಸಿಎಂಎಸ್ ಬಳಿ ಪಟ್ಟಣದ ಸುಮಾರು 2000 ಪಡಿತರ ಚೀಟಿದಾರರು ಬೆಳಗ್ಗೆಯಿಂದ ಸಂಜೆವರೆಗೆ ಪಡಿತರ ಪಡೆಯಲು ಹರಸಾಹಸ ಪಡುತ್ತಿದ್ದರು. ಶಾಸಕರರ ಗಮನಕ್ಕೆ ಬಂದ ಮೇಲೆ ಶಾಸಕರು ನಮಗೆ ಸೂಚನೆ ನೀಡಿ ಕಲ್ಯಾಗೇಟ್ ಮತ್ತು ಅಕ್ಕಪಕ್ಕದ ವಾರ್ಡ್ಗಳ ಜನತೆಗೆ ಅನುಕೂವಾಗುವಂತೆ ಒಂದು ಮಳಿಗೆಯನ್ನು ಬಾಡಿಗೆಗೆ ಪಡೆದು ಆ ಭಾಗದ ಜನತೆಗೆ ಅಲ್ಲಿಯೇ ಪಡಿತರ ವಿತರಿಸುವಂತೆ ಸೂಚನೆ ನೀಡಿದ್ದರ ಮೇರೆಗೆ ಟಿಎಪಿಸಿಎಂಎಸ್ ವತಿಯಿಂದ ಮಳಿಗೆ ತೆರೆಯಲಾಗಿದೆ. ತಾಲೂಕಿನಲ್ಲಿ ಟಿಎಪಿಸಿಎಂಎಸ್ ವತಿಯಿಂದ ತಾಲೂಕಿನ ರೈತರಿಗೆ ತೊಂದರೆಯಾಗದಂತೆ ರಸಗೊಬ್ಬರ ವಿತರಣೆ ಮಾಡಲಾಗುತ್ತಿದೆ. ಈವರೆಗೆ ಸುಮಾರು 200 ಟನ್ ಗೊಬ್ಬರ ವಿತರಣೆ ಮಾಡಲಾಗಿದೆ. ರೈತರಿಗೆ ಅವಶ್ಯಕತೆಗೆ ತಕ್ಕಂತೆ ರಿಯಾಯಿತಿ ದರದಲ್ಲಿ ರಸಗೊಬ್ಬರ ವಿತರಣೆ ಮಾಡಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ರಾಜಣ್ಣ, ನಿರ್ದೇಶಕರಾದ ಮುತ್ತಸಾಗರ ಸೋಮಣ್ಣ, ಎಂ.ಆರ್.ಮಂಜುನಾಥ್, ನಂಜುಂಡಯ್ಯ, ರಮೇಶ್, ಗಂಗಣ್ಣ, ಮಹದೇವ್, ದೊಡ್ಡಸೋಮನಹಳ್ಳಿ ನಂಜುಂಡಯ್ಯ, ವಿಜಯ್ ಕುಮಾರ್ ರವೀಶ್, ಕಲ್ಲೂರು ರಂಗನಾಥ್, ಪುರಸಭಾ ಅಧ್ಯಕ್ಷೆ ರಮ್ಯ ನರಸಿಂಹಮೂರ್ತಿ, ಉಪಾಧ್ಯಕ್ಷ ರಿಯಾಝ್, ಸದಸ್ಯ ಎಂ.ಎನ್.ಮಂಜುನಾಥ್ ಇತರ ಮುಖಂಡರಿದ್ದರು.(ಫೋಟೊ ಕ್ಯಾಪ್ಷನ್)
ಮಾಗಡಿ ಪಟ್ಟಣದ 18ನೇ ವಾರ್ಡನಲ್ಲಿ ನೂತನ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿದ ಶಾಸಕ ಎಚ್.ಸಿ.ಬಾಲಕೃಷ್ಣ ಪಡಿತರದಾರರಿಗೆ ಅಕ್ಕಿ ವಿತರಿಸಿದರು.