ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಹೊರವಲಯದ ಬಂಡಬೋಯನಹಳ್ಳಿ ಗ್ರಾಮದ ಸಮೀಪದ ಶ್ರೀಮಲೈ ಮಹದೇಶ್ವರಸ್ವಾಮಿ ದೇವಾಲಯದಲ್ಲಿ 25ನೇ ವರ್ಷ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀಮಲೈ ಮಹದೇಶ್ವರಸ್ವಾಮಿ ಅದ್ಧೂರಿ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಹಾಗೂ ಮಹದೇಶ್ವರರ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಉತ್ಸವದ ಅಂಗವಾಗಿ ನೂರಾರು ಮಕ್ಕಳಿಗೆ ನಾಮಕರಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಪ್ರಕಾಶ್ ಗುರೂಜಿ, ಮಲೈ ಮಹದೇಶ್ವರರು ನಮ್ಮ ಜಾನಪದ ಮುಖ್ಯ ಆರಾಧ್ಯ ದೈವ. ಹುಲಿವಾಹನಧಾರಿಯಾದ ಮಹದೇಶ್ವರ ರ ಬಗ್ಗೆ ಅಪಾರವಾದ ನಂಬಿಕೆ ಹಾಗೂ ಭಕ್ತಿ ವಿಶ್ವಾಸಗಳಿವೆ ಎಂದರು.ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯ ಸ್ಥಾಪನೆ ಮಾಡಿ 25 ವರ್ಷಗಳು ರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸ್ವಾಮಿ ರಜತ ಮಹೋತ್ಸವ ಸಂಭ್ರಮವನ್ನು ವೈಭವದ ಮೆರವಣಿಗೆಯೊಂದಿಗೆ ನಡೆಸಿ ಸಾವಿರಾರು ಭಕ್ತಾದಿಗಳಿಗೆ ಅನ್ನಪ್ರಸಾದವನ್ನು ನೀಡಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ನಡೆಸಲಾಗಿದೆ ಎಂದರು.
ಈ ವೇಳೆ ಅಗ್ರಹಾರಬಾಚಹಳ್ಳಿ ಗ್ರಾಪಂ ಅಧ್ಯಕ್ಷ ದಿವಿ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಜಗದೀಶ್, ವೀರಶೈವ ಸಮಾಜದ ಮುಖಂಡರಾದ ತೋಟಪ್ಪಶೆಟ್ಟಿ, ಧನಂಜಯಕುಮಾರ್, ಬ್ಯಾಂಕ್ ಪರಮೇಶ್ವರ, ಡಿಂಕಾ ಮಹೇಶ್, ಸಾಸಲು ಈರಪ್ಪ, ಶ್ರೀ ಚನ್ನಬಸವೇಶ್ವರ ಕಲ್ಲು ಮಠದ ಶ್ರೀ ವಿರೂಪಾಕ್ಷ ರಾಜಯೋಗಿ ಶಿವಯೋಗಿ ಸ್ವಾಮೀಜಿಗಳು, ಶಿಕ್ಷಣ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಎಸ್.ಸಿ.ನಾಗೇಶ್, ಗ್ರಾಪಂ ಸದಸ್ಯ ಆರ್.ಶ್ರೀನಿವಾಸ್, ವಳಗೆರೆಮೆಣಸ ರಮಾನಂದ, ಅನುವಿನಕಟ್ಟೆ ರಾಮಕೃಷ್ಣೇಗೌಡ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಇದ್ದರು.