ನಕಲಿ ಸಿಬಿಐ ಅಧಿಕಾರಿ ಬಂಧನ

KannadaprabhaNewsNetwork |  
Published : Jul 31, 2024, 01:05 AM IST
ನಕಲಿ ಸಿಪಿಐ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ | Kannada Prabha

ಸಾರಾಂಶ

ಬೆಳಗಾವಿ: ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹುಕ್ಕೇರಿ ತಾಲೂಕಿನ ಇಸ್ಲಾಂಪುರ ದಯಾನಂದ ರಾಮು ಜೀನ್ರಾಳ (34) ಬಂಧಿತ ಆರೋಪಿ. ಈತ ತರಬೇತಿ ಶಾಲೆ ತೆರೆದು ನಾನು ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸಂದರ್ಭಕ್ಕೆ ತಕ್ಕಂತೆ ಸಿಬಿಐ, ಇಡಿ, ಐಟಿ ಅಧಿಕಾರಿ ಎಂದು ನಂಬಿಸಿ ಕೋಟ್ಯಂತರ ರು.ಪಂಗನಾಮ ಹಾಕಿದ್ದ. ನಂತರ ಈ ವಿಚಾರ ಅರಿತ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಾಳಮಾರುತಿ ಸಿಪಿಐ ಜೆ.ಎಂ‌.ಕಾಲಿಮಿರ್ಚಿ ತಂಡಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ಸ್ನೇಹಾ ಪಿ.ವಿ.ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ