ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಎಲ್ಲಿಯೂ ಮಹಾತ್ಮ ಗಾಂಧಿಯೊಂದಿಗೆ ಓಲೈಕೆ ಮಾಡುವ ಸಾಹಸ ಮಾಡಿಲ್ಲ. ಆದರೆ, ಕುಮಾರಸ್ವಾಮಿ ಅವರು ಈ ಬಗ್ಗೆ ಟೀಕಿಸುತ್ತಿರುವುದಕ್ಕೆ ವಿಷಾದಿಸಿದರು.
ಕೇಂದ್ರ ಸಚಿವರನ್ನು ಮುಖ್ಯಮಂತ್ರಿ ಮಾಡಿದ್ದು, ಅವರ ತಂದೆ ಎಚ್.ಡಿ.ದೇವೇಗೌಡರನ್ನು ಪ್ರಧಾನಿಯನ್ನಾಗಿ ಮಾಡಿದ್ದು ಕಾಂಗ್ರೆಸ್ ಎಂಬುದನ್ನು ಮರೆತು ಮಾತನಾಡುತ್ತಿದ್ದಾರೆ. ಈಗ ದೇವೇಗೌಡರು ರಾಜ್ಯಸಭಾ ಸದಸ್ಯರಾಗಿರುವುದೂ ಸಹ ಕಾಂಗ್ರೆಸ್ ಬೆಂಬಲದಿಂದಲೇ ಎಂದು ತಿರುಗೇಟು ನೀಡಿದರು.ಇಡೀ ರಾಷ್ಟ್ರವೇ ಮೆಚ್ಚುವ ಗ್ಯಾರಂಟಿ ಯೋಜನೆ ತಂದಿರುವುದನ್ನು ಸಹಿಸಲಾಗದೆ 40 ಮಂದಿ ಕಳ್ಳರಿಗೆ ಹೋಲಿಸಿರುವುದನ್ನು ನೋಡಿದರೆ ಇವರು ವಿರೋಧ ಪಕ್ಷದಲ್ಲಿದ್ದಾರೋ ಅಥವಾ ಆಡಳಿತ ಪಕ್ಷದಲ್ಲಿರುವರೋ ಎಂಬ ಅನುಮಾನ ಮೂಡುತ್ತಿದೆ ಎಂದರು.
ಪುತ್ರ ನಿಖಿಲ್ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸೋಲುಂಡರು, ಚನ್ನಪಟ್ಟಣದಲ್ಲಿ ಸೋಲಿನ ನಂತರ ಹತಾಶರಾಗಿ ಕಾಂಗ್ರೆಸ್ ಮತ್ತು ರಾಜ್ಯ ಸರ್ಕಾರದ ಸಚಿವರ ವಿರುದ್ಧ ಇಂತಹ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಕೇಂದ್ರ ಸಚಿವರಾಗಿ ತಮ್ಮ ಜವಾಬ್ದಾರಿಗೆ ತಕ್ಕಂತೆ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಸ್ಥಾಪಿಸಿರುವ ತಮ್ಮ ಸ್ವಂತ ಶಾಲೆಗೆ ಸರ್ಕಾರಿ ಹಣವನ್ನು ಬಳಸಿಕೊಂಡಂತೆ ನಮ್ಮ ಕಾಂಗ್ರೆಸ್ ನಾಯಕರು, ಶಾಸಕರು ಬಳಸಿಕೊಂಡಿಲ್ಲ. ಇಂತಹ ವ್ಯಕ್ತಿ ಅಭಿವೃದ್ಧಿ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದು ಆರೋಪಿಸಿದರು.